ಕುದ್ಮಾರು ಶಾಲಾ ನಿವೃತ್ತ ಮುಖ್ಯಗುರು ರಾಜ್ಯ ಪ್ರಶಸ್ತಿ ಪುರಸ್ಕೃತ ಮದನ ಪೂಜಾರಿ ನಿಧನ

0

ಪುತ್ತೂರು: ಕುದ್ಮಾರು ಗ್ರಾಮದ ಚಾಪಳ್ಳ ನಿವಾಸಿ, ಕುದ್ಮಾರು ಶಾಲಾ ನಿವೃತ್ತ ಮುಖ್ಯಗುರು, ರಾಜ್ಯ ಪ್ರಶಸ್ತಿ ಪುರಸ್ಕೃತರಾಗಿದ್ದ ಮದನ ಪೂಜಾರಿ(79ವ.)ರವರು ಮಾ.16ರಂದು ರಾತ್ರಿ ನಿಧನರಾದರು.

35 ವರ್ಷಗಳ ಕಾಲ ಮುಖ್ಯ ಶಿಕ್ಷಕರಾಗಿ ಕುದ್ಮಾರು ಶಾಲೆಯಲ್ಲಿ ಸೇವೆಸಲ್ಲಿಸಿದ್ದ ಇವರು ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಾಲಯದ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆಸಲ್ಲಿಸಿದ್ದರು. ಬಿಲ್ಲವ ಸಂಘ ಸೇರಿದಂತೆ ಅನೇಕ ಸಂಘ ಸಂಸ್ಥೆಗಳಲ್ಲಿ ದುಡಿಯುತ್ತಾ ಚಿರಪರಿಚಿತರಾಗಿದ್ದ ಇವರು ಕಳೆದ ಹಲವು ವರ್ಷಗಳಿಂದ ಸುದ್ದಿ ಬಿಡುಗಡೆ ಪತ್ರಿಕೆ ಏಜೆಂಟರಾಗಿಯೂ ಸೇವೆ ಸಲ್ಲಿಸುತ್ತಿದ್ದರು.

ಮೃತರು ಪತ್ನಿ ಭವಾನಿ, ಮಕ್ಕಳಾದ ರೋಶನ್, ಪ್ರಶಾನ್, ವಂದನಾ ಹಾಗೂ ಅಳಿಯ, ಸೊಸೆಯಂದಿರು,ಮೊಮ್ಮಕ್ಕಳನ್ನು ಅಗಲಿದ್ದಾರೆ.


ಮಾ.17ರಂದು ಅಂತ್ಯ ಸಂಸ್ಕಾರ:

ಮೃತರ ಅಂತ್ಯ ಸಂಸ್ಕಾರ ಮಾ.17ರಂದು ಬೆಳಿಗ್ಗೆ 10 ಗಂಟೆಗೆ ಕುದ್ಮಾರು ಗ್ರಾಮದ ಚಾಪಳ್ಳದಲ್ಲಿ ಮೃತರ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here