ಎಸ್‌ಡಿಪಿಐಯಿಂದ ರಕ್ತದಾನ ಶಿಬಿರ

0

ಉಪ್ಪಿನಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಕ್ಷದ ಉಪ್ಪಿನಂಗಡಿ ಬ್ಲಾಕ್ ಸಮಿತಿ ಹಾಗೂ ಶಾಫಿ ಬೆಳ್ಳಾರೆ ಅಭಿಮಾನಿ ಬಳಗದ ವತಿಯಿಂದ ರಕ್ತದಾನ ಮಾಸಾಚರಣೆಯ ಪ್ರಯುಕ್ತ ಉಪ್ಪಿನಂಗಡಿಯ ಎಚ್.ಎಂ. ಹಾಲ್‌ನಲ್ಲಿ ರಕ್ತದಾನ ಶಿಬಿರ ನಡೆಯಿತು.


ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ಉದ್ಘಾಟನಾ ಭಾಷಣ ಮಾಡಿದರು. ಉಪ್ಪಿನಂಗಡಿ ಬ್ಲಾಕ್ ಸಮಿತಿಯ ಅಧ್ಯಕ್ಷ ಮುಸ್ತಫಾ ಲತೀಫಿ ಅಧ್ಯಕ್ಷತೆ ವಹಿಸಿದ್ದರು. ರೋಟರಿ ರಕ್ತ ನಿಧಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರಾಮಕೃಷ್ಣ ಭಟ್ ರಕ್ತದಾನದ ಬಗ್ಗೆ ವಿವರಿಸಿದರು. ವೇದಿಕೆಯಲ್ಲಿ ಎಸ್‌ಡಿಪಿಐ ಪುತ್ತೂರು ವಿಧಾನ ಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ಇಬ್ರಾಹಿಂ ಸಾಗರ್, ಉಪಾಧ್ಯಕ್ಷ ಹಮೀದ್ ಸಾಲ್ಮರ, ಅಧ್ಯಕ್ಷ ಜುನೈದ್ ಸಾಲ್ಮರ, ಗ್ರಾ.ಪಂ. ಸದಸ್ಯ ಇಬ್ರಾಹಿಂ ಮೈಸೀದಿ ಉಪಸ್ಥಿತರಿದ್ದರು.
ಉಪ್ಪಿನಂಗಡಿ ಗ್ರಾ.ಪಂ. ಸದಸ್ಯ ರಶೀದ್ ಮಠ ಸ್ವಾಗತಿಸಿದರು. ಬ್ಲಾಕ್‌ನ ಪ್ರಧಾನ ಕಾರ್ಯದರ್ಶಿ ಶರೀಫ್ ಬೆದ್ರೋಡಿ ವಂದಿಸಿದರು.

LEAVE A REPLY

Please enter your comment!
Please enter your name here