ಮುಂಡೂರು ಶ್ರೀಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ ಸಂಪನ್ನ- ದೇವರ ಬಲಿ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ನೇಮೋತ್ಸವ

0

ನರಿಮೊಗರು: ಮುಂಡೂರು ಶ್ರೀಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಮಾ.15ರಂದು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಯವರ ನೇತೃತ್ವದಲ್ಲಿ ಆರಂಭಗೊಂಡ ವರ್ಷಾವಧಿ ಜಾತ್ರೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಮಾ.16ರಂದು ಸಂಪನ್ನಗೊಂಡಿತು.

ಮಾ.16ರಂದು ಶ್ರೀಮಹಾಗಣಪತಿ ಹೋಮ, ಕಲಶ ಪೂಜೆ, ಶ್ರೀ ದೇವರ ಬಲಿ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಶ್ರೀದೇವರಿಗೆ ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಅನ್ನಸಂತರ್ಪಣೆ, ರಂಗಪೂಜೆ, ದೈವದ ನೇಮೋತ್ಸವ ನಡೆಯಿತು.

ಶಾಸಕ ಸಂಜೀವ ಮಠಂದೂರು, ಮಾಜಿ ಶಾಸಕಿ ಶಕುಂತಲಾ ಟಿ. ಶೆಟ್ಟಿ, ಡಾ.ಎಂ.ಕೆ ಪ್ರಸಾದ್‌ರವರು ಭೇಟಿ ನೀಡಿದ್ದರು. ವ್ಯವಸ್ಥಾಪನಾ ಸಮಿತಿ ಅದ್ಯಕ್ಷ ಲೋಕಪ್ಪ ಗೌಡ ಕರೆಮನೆ, ಸದಸ್ಯರಾದ ಕುತ್ತಿಗದ್ದೆ ಜನಾರ್ದನ ಜೋಯಿಸ, ನಾಗೇಶ್ ನಾಕ್, ನಾರಾಯಣ ನಾಯ್ಕ್, ಬಾಲಚಂದ್ರ ಗೌಡ ಕಡ್ಯ, ವೇದಾವತಿ ಕೆದ್ಕಾರು ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.

ಪ್ರಧಾನ ಅರ್ಚಕ ರಮೇಶ ಬೈಪಾಡಿತ್ತಾಯ ಮಹಾಪೂಜೆ ನಡೆಸಿಕೊಟ್ಟರು. ಸಹಾಯಕ ಅರ್ಚಕ ಶಂಕರನಾರಾಯಣ ಭಟ್, ಸಿಬಂದಿ ವಿಜಿತ್, ಸ್ವಯಂಸೇವಕರು, ಭಕ್ತಾದಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here