ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

0

ವಿಟ್ಲ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವೀರಕಂಭ ಬೆತ್ತಸರವು ಎಂಬಲ್ಲಿ ನಡೆದಿದೆ. ವೀರಕಂಭ ಬೆತ್ತಸರವು ನಿವಾಸಿ ವಿಶ್ವನಾಥ ಸಪಲ್ಯ (65 ವ.)ರವರು ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.

ಅವರ ಪತ್ನಿ ಕಾರ್ಯಕ್ರಮದ ನಿಮಿತ್ತ ಹೊರಗೆ ಹೋಗಿ ಮರಳಿ ಮನೆಗೆ ಬಂದ ವೇಳೆ ಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮೃತದೇಹವನ್ನು ವಿಟ್ಲ ಸಮುದಾಯ ಆರೋಗ್ಯಕೇಂದ್ರದಲ್ಲಿ ಮಹಜರು ನಡೆಸಲಾಗಿದೆ.

ತನ್ನ ಪತಿ ಅನಾರೋಗ್ಯದಿಂದಿದ್ದು, ಅದರಿಂದಾಗಿ ಮಾನಸಿಕವಾಗಿ ನೊಂದು ಮನೆಯ ಪಕ್ಕದ ಕೋಣೆಯ ಪಕ್ಕಾಸಿಗೆ ನೈಲಾನ್ ಹಗ್ಗವನ್ನು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಪತ್ನಿ ಜಯಂತಿರವರು ವಿಟ್ಲ ಠಾಣಾ ಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಶ್ವನಾಥ ರವರ ಇಬ್ಬರು ಮಕ್ಕಳು ವಿದೇಶದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಮೃತರು ಪತ್ನಿ, ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here