ಬನ್ನೂರು ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

0

ಪುತ್ತೂರು: ಬನ್ನೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಸಕರ ಅನುದಾನದಲ್ಲಿ ಶುದ್ದ ಕುಡಿಯುವ ನೀರಿನ ಘಟಕ ಮತ್ತು ಸ್ಮಾರ್ಟ್ ಕ್ಲಾಸ್ ಅನ್ನು ಮಾ.18ರಂದು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿದರು.


ಸರಕಾರಿ ಶಾಲೆಯಲ್ಲೂ ಆಧುನಿಕ ಸೌಲಭ್ಯ:
ಶಾಸಕ ಸಂಜೀವ ಮಠಂದೂರು ಅವರು ಮಾತನಾಡಿ ಸರಕಾರಿ ಶಾಲೆಗಳು ಆಧುನಿತೆ ಮತ್ತು ಉತ್ತಮ ಶಿಕ್ಷಣ ವ್ಯವಸ್ಥೆ ಸಿಗುವ ನಿಟ್ಟಿನಲ್ಲಿ ಅದಕ್ಕೆ ಪೂರಕ ವ್ಯವಸ್ಥೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸರಕಾರಿ ಶಾಲೆಗಳು ಮುಚ್ಚಬಾರದು. ಇತಿಹಾಸ ನಿರ್ಮಾಣ ಮಾಡುವ ಕೆಲಸ ಆಗಬೇಕೆಂದರು. ಶಾಲೆಯ ಪ್ರಭಾರ ಮುಖ್ಯಗುರು ರಾಮಚಂದ್ರ ಬಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಗುರುಪ್ರಸಾದ್, ನಗರಸಭಾ ಸದಸ್ಯೆ ಗೌರಿ ಬನ್ನೂರು, ಅಂಗನವಾಡಿ ಕಾರ್ಯಕರ್ತೆ ರೋಹಿಣಿ, ಎಸ್.ಡಿ.ಎಂ.ಸಿ ಸದಸ್ಯರು ಮತ್ತು ಪೋಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here