ಪಾಂಡವರಕಲ್ಲು: ಬಂಟ್ವಾಳ ಪ್ರಜಾಧ್ವನಿ ಯಾತ್ರೆ

0

ಬಂಟ್ವಾಳವನ್ನು ಅಭಿವೃದ್ಧಿಯ ಪಥದಲ್ಲಿ ಕೊಂಡೊಯ್ದವರು ರೈಗಳು: ಪಂಜಿಗುಡ್ಡೆ ಈಶ್ವರ ಭಟ್
ಪ್ರಾಮಾಣಿಕವಾಗಿ ಸುದೀರ್ಘ ರಾಜಕೀಯ ಮಾಡಿದ್ದೇನೆ: ಬಿ. ರಮಾನಾಥ ರೈ

ವಿಟ್ಲ : ಅಭಿವೃದ್ದಿಯ ಹರಿಕಾರ ಮಾಜಿ ಸಚಿವ ಬಿ ರಮಾನಾಥ ರೈ ಅವರನ್ನು ಅಪಪ್ರಚಾರ ಮಾಡಿ ಸೋಲಿಸಲು ಈ ಬಾರಿ ಸಾಧ್ಯವಿಲ್ಲ,ತಾಕತ್ತಿದ್ದರೆ ಅಭಿವೃದ್ದಿ ಮೂಲಕ ಸವಾಲು ಹಾಕಿ, ಹೊರತು ವಾಮಮಾರ್ಗದ ಮೂಲಕ ಅಲ್ಲ ಎಂದು ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ್ ಭಟ್ ರವರು ಸವಾಲೆಸೆದಿದ್ದಾರೆ.


ಕಾಂಗ್ರೆಸ್ ಪಕ್ಷದ ವತಿಯಿಂದ ಮಾಜಿ ಸಚಿವ ಬಿ ರಮಾನಾಥ ರೈ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಬಂಟ್ವಾಳ ಪ್ರಜಾಧ್ವನಿ ಯಾತ್ರೆಯ ೩ನೇ ದಿನ ಪಾಂಡವರಕಲ್ಲು ಜಂಕ್ಷನ್ನಿನಲ್ಲಿ ನಡೆದ ಸಾರ್ವಜನಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.


ಅತೀ ದೊಡ್ಡ ಜಾತ್ಯಾತೀತ ಪಕ್ಷ ಕಾಂಗ್ರೆಸ್ ಆಗಿದ್ದು, ದೇಶದ ಎಲ್ಲಾ ವರ್ಗದ ಜನರಿಗೂ ಸಮಾನವಾಗಿ ಅವಕಾಶ ಒದಗಿಸಿ, ಎಲ್ಲರ ಶ್ರೇಯೋಭಿವೃದ್ದಿ ಬಯಸುವ ಏಕೈಕ ಪಕ್ಷ ಇದ್ದರೆ ಅದು ಕಾಂಗ್ರೆಸ್ ಮಾತ್ರ. ಅದೇ ರೀತಿ ಬಂಟ್ವಾಳದ ಸುದೀರ್ಘ ಅವಧಿಯ ಶಾಸಕ, ಮಾಜಿ ಸಚಿವ ಬಿ ರಮಾನಾಥ ರೈ ಅವರು ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಈ ಕ್ಷೇತ್ರಕ್ಕೆ ಮಾಡಿದ್ದಾರೆ. ದೊಡ್ಡ ದೈವಭಕ್ತರಾದ , ಅವರನ್ನು ಹಿಂದೂ ವಿರೋಧಿ ಎಂದು ಅಪಪ್ರಚಾರ ನಡೆಸಿ ಸೋಲಿಸುವಲ್ಲಿ ಬಿಜೆಪಿಗರು ಈ ಹಿಂದೆ ಸಫಲರಾಗಿರಬಹುದು. ಮುಂದಿನ ದಿನಗಳಲ್ಲಿ ಅದು ಸಾಧ್ಯವಿಲ್ಲ ಎಂದು ಹೇಳಿದರು.


ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಬಿ ರಮಾನಾಥ ರೈ ಪ್ರಾಮಾಣಿಕವಾಗಿ ಸುದೀರ್ಘ ರಾಜಕೀಯ ಮಾಡಿದ್ದೇನೆ. ಪಕ್ಷಕ್ಕೂ ಯಾವುದೇ ಕಳಂಕ ತಂದಿಲ್ಲ. ಕ್ಷೇತ್ರದ ಜನ ಹಾಗೂ ಈ ರಾಜ್ಯದ ಜನರಿಗೆ ಅವಮಾನವಾಗುವ ಯಾವುದೇ ರೀತಿಯ ಕೆಲಸವನ್ನು ನಾನು ಮಾಡಿಲ್ಲ. ಬಂಟ್ವಾಳ ಕ್ಷೇತ್ರಕ್ಕೆ ನಿಸ್ವಾರ್ಥವಾಗಿ ದುಡಿದಿದ್ದೇನೆ, ಈ ಬಾರಿ ನನ್ನ ಕೊನೆಯ ಅಸೆಂಬ್ಲಿ ಚುಣಾವಣೆ, ಮತ್ತೊಮ್ಮೆ ಆರಿಸಿ ಕಳುಹಿಸಿದಲ್ಲಿ ಕಳೆದ ಬಾರಿ ಮಾಡಿದ್ದಕ್ಕಿಂತ ದುಪ್ಪಟ್ಟು ಅನುದಾನ ತಂದು ಇನ್ನಷ್ಟು ಅಭಿವೃದ್ದಿ ಕಾರ್ಯಗಳನ್ನು ನಡೆಸುತ್ತೇನೆ ಎಂದರು.


ಈ ಸಂದರ್ಭ ಯಾತ್ರಾ ಸಂಚಾಲಕ ಪಿಯೂಸ್ ಎಲ್ ರೋಡ್ರಿಗಸ್, ಪಕ್ಷದ ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ, ಬಿ ಪದ್ಮಶೇಖರ್ ಜೈನ್, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಸದಾಶಿವ ಬಂಗೇರ, ರಾಜೀವ್ ಶೆಟ್ಟಿ ಎಡ್ತೂರು, ಮಾಯಿಲಪ್ಪ ಸಾಲಿಯಾನ್, ಬಿ ಎಂ ಅಬ್ಬಾಸ್ ಅಲಿ, ಪಿ ಎ ರಹೀಂ, ಪ್ರವೀಣ್ ರೋಡ್ರಿಗಸ್ ವಗ್ಗ, ಸತೀಶ್ಚಂದ್ರ ಹೊಸಮನೆ, ಬಿ ಅಬ್ದುಲ್ಲ, ಜಯ ಬಂಗೇರ, ಸುಧಾಕರ್ ಶೆಣೈ ಖಂಡಿಗ, ಅಸ್ಮಾ ಅಝೀಝ್, ಡೀಕಯ್ಯ ಬಂಗೇರ, ಬಾಲಾಜಿ ರಾವ್, ಪ್ರಶಾಂತ್ ಜೈನ್, ರಕ್ಷಿತಾ, ಮೋಹಿನಿ, ಜೋನ್ ಸಿಕ್ಷೇರಾ, ವಸಂತ ಮಿತ್ತೋಟು, ಮೋಹನ್ ಸಾಲ್ಯಾನ್, ಸುಧೀರ್ ಶೆಟ್ಟಿ, ಪ್ರಶಾಂತ್ ಕೋಟ್ಯಾನ್, ನೆಲ್ವಿಸ್ಟರ್ ಪಿಂಟೋ, ಸುಚಿತ್ರ ಶೆಟ್ಟಿ, ಲವೀನಾ ಮೊರಾಸ್, ಎಸ್ ಪಿ ಮುಹಮ್ಮದ್ ರಫೀಕ್ ಮೊದಲಾದವರು ಉಪಸ್ಥಿತರಿದ್ದರು.‌


ಬಡಗಕಜೆಕಾರು ಗ್ರಾ ಪಂ ಉಪಾಧ್ಯಕ್ಷ ಬಿ ಕೆ ಬಂಗೇರ ಪರ್ಲ ಸ್ವಾಗತಿಸಿ, ಮಾಣಿ ಗ್ರಾ ಪಂ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here