ಕೆದಂಬಾಡಿ: ಲಿಂಗಾಧಾರಿತ ದೌರ್ಜನ್ಯ ಮಾಹಿತಿ ಕಾರ್ಯಕ್ರಮ

0

ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್‌ನ ಆಸರೆ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕೆದಂಬಾಡಿ ಇದರ ಆಶ್ರಯದಲ್ಲಿ ನಡೆದ ಒಕ್ಕೂಟ ಸಭೆಯಲ್ಲಿ ಮಹಿಳಾ ದಿನಾಚರಣೆ ಹಾಗೂ ವಿದ್ಯಾರ್ಥಿಗಳಿಗೆ ಲಿಂಗಾಧಾರಿತ ದೌರ್ಜನ್ಯದ ಬಗ್ಗೆ ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ತಿಂಗಳಾಡಿ ಆರೋಗ್ಯ ಕೇಂದ್ರದ ಸಹಾಯಕಿ ನೇತ್ರ ಮಾಹಿತಿ ನೀಡಿದರು.


ಸಭೆಯಲ್ಲಿ ಪಂಚಾಯತ್ ಅಧ್ಯಕ್ಷ ರತನ್ ರೈ ಕುಂಬ್ರ, ಪಂಚಾಯತ್ ಸದಸ್ಯರುಗಳು, ಒಕ್ಕೂಟದ ಅಧ್ಯಕ್ಷರು,ಕಾರ್ಯದರ್ಶಿ, ಪದಾಧಿಕಾರಿಗಳು, ಪಂಚಾಯತ್ ಕಾರ್ಯದರ್ಶಿ ಸುನಂದಾ ರೈ, ಸಂಘದ ಸದಸ್ಯರು ಹಾಗೂ ಯಲ್‌ಸಿಆರ್‌ಪಿ ಜಯಲತ, ಎಂಬಿಕೆ ಪೂರ್ಣಿಮಾ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here