ನಾಳೆ(ಮಾ.21) ಪುತ್ತೂರಿನಲ್ಲಿ ಮಜಲುಮಾರು ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ವಿತರಣೆ

0

ಪುತ್ತೂರು:ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾ.25ರಿಂದ31ರ ತನಕ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಮಾ.21ರಂದು ಬೆಳಿಗ್ಗೆ ಪುತ್ತೂರು ನಗರದಲ್ಲಿ ವಿತರಿಸಲಾಗುವುದು.


ಆಮಂತ್ರಣ ಪತ್ರಿಕೆ ವಿತರಣೆಗೆ ಬೆಳಿಗ್ಗೆ 9.30 ಕ್ಕೆ ಬೊಳುವಾರು ಆಂಜನೇಯ ಮಂತ್ರಾಲಯದ ಬಳಿ ಆಮಂತ್ರಣ ವಿತರಣೆಗೆ ಚಾಲನೆ ನೀಡಲಾಗವುದು. ಬಳಿಕ ಮುಖ್ಯ ರಸ್ತೆಯ ಮೂಲಕ ದರ್ಬೆ, ಕೂರ್ನಡ್ಕ ತನಕ ಆಮಂತ್ರಣ ವಿತರಿಸಲಾಗುವುದು ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here