ಕೊಯಿಲ ಪಶುಸಂಗೋಪನಾ ಇಲಾಖೆಯ ನಿವೃತ್ತ ಉದ್ಯೋಗಿ ಕೆ.ಎಂ.ನಾರಾಯಣ ನಿಧನ

0

ರಾಮಕುಂಜ: ಕಡಬ ತಾಲೂಕಿನ ಕೊಯಿಲ ಗ್ರಾಮದ ಕೆಮ್ಮಾರ ಬಡಿಲ ಮನೆ ನಿವಾಸಿ ಕೆ.ಎಂ.ನಾರಾಯಣ(ನಾಣು)(88ವ.)ರವರು ಅಲ್ಪಕಾಲದ ಅಸೌಖ್ಯದಿಂದ ಮಾ.15ರಂದು ಸ್ವಗೃಹದಲ್ಲಿ ನಿಧನರಾದರು.


ನಾರಾಯಣ ಅವರು ಕೊಯಿಲ ಪಶು ಸಂಗೋಪನಾ ಇಲಾಖೆಯಲ್ಲಿ ಹಲವು ವರ್ಷ ಸೇವೆಸಲ್ಲಿಸಿ 1992ರಲ್ಲಿ ನಿವೃತ್ತಿಯಾಗಿದ್ದರು. ಮೃತರು ಪತ್ನಿ ಲೀಲಾವತಿ, ಪುತ್ರಿ ಪದ್ಮಲತಾ, ಪುತ್ರರಾದ ಸತೀಶ್ ಹಾಗೂ ಶ್ರೀಶಕುಮಾರ್ ಅವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here