ನಾಳೆ(ಮಾ.22) ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಅಗ್ರಶಾಲೆಯ ಉದ್ಘಾಟನೆ-ಸಮರ್ಪಣೆ

0

ಕಾವು : ಕಾವು ನಿಧಿಮುಂಡ ಕೆ. ವೆಂಕಟ್ರಾವ್‌ರವರ ಸ್ಮರಣಾರ್ಥ ಪತ್ನಿ ಕಾವೇರಿಯಮ್ಮ ಮತ್ತು ಮಕ್ಕಳು, ಕೆ. ರಘುರಾಮ ರಾವ್ ಮತ್ತು ಸಹೋದರರ ಸೇವಾರ್ಥವಾಗಿ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಿರ್ಮಾಣ ಮಾಡಿರುವ ನೂತನ ಅಗ್ರಶಾಲೆಯ ಉದ್ಘಾಟನೆ ಮತ್ತು ಸಮರ್ಪಣಾ ಕಾರ್ಯಕ್ರಮವು ಮಾ.22ರಂದು ನಡೆಯಲಿದೆ.

ಬೆಳಿಗ್ಗೆ ಶ್ರೀದೇವಳದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆದು ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ದುರ್ಗಾಪೂಜೆ ನಡೆಯಲಿದೆ. ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ ನಿಧಿಮುಂಡರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here