ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು ಇದರ ನೂತನ ಪದಾಧಿಕಾರಿಗಳ ಆಯ್ಕೆ

0

ಸವಣೂರು : ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಕಡಬ ತಾಲೂಕಿನ ನೂತನ ಪದಾಧಿಕಾರಿಗಳ ಆಯ್ಕೆಯು ಮಾ.20 ರಂದು ಕಡಬದ ಅಂಬೇಡ್ಕರ್ ಭವನದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಿತು.

ನೂತನ ಅಧ್ಯಕ್ಷರಾಗಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸವಣೂರು ವಲಯ ಅಧ್ಯಕ್ಷ ನ್ಯಾಯವಾದಿ ಮಹೇಶ್ ಕೆ.ಸವಣೂರು, ಉಪಾಧ್ಯಕ್ಷರಾಗಿ ಸೀತಾರಾಮ ಗೌಡ ಪೊಸವಳಿಕೆ, ಕಾರ್ಯದರ್ಶಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ಇದರ ಯೋಜನಾಧಿಕಾರಿ ಮೇದಪ್ಪ ನಾವೂರುರವರನ್ನು ಆಯ್ಕೆ ಮಾಡಲಾಯಿತು.

ನೆಲ್ಯಾಡಿ, ಸವಣೂರು, ಕಡಬ, ಬಿಳಿನೆಲೆ, ಗೋಳಿತೊಟ್ಟು, ಆಲಂಕಾರು ವಲಯದ 30 ಸದಸ್ಯರನ್ನು ತಾಲೂಕು ಸಮಿತಿಗೆ ಆಯ್ಕೆ ಮಾಡಲಾಯಿತು. 

ಸಭೆಯಲ್ಲಿ ರಾಜ್ಯ ಜನಜಾಗೃತಿ ವೇದಿಕೆ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್, ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್, ಪುತ್ತೂರು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹಾಬಲ ರೈ ವಳತ್ತಡ್ಕ, ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ, ಶೌರ್ಯ ವಿಪತ್ತು ನಿರ್ವಹಣಾ ಯೋಜನಾಧಿಕಾರಿ ಜೈವಂತ್‌ ಪಟಗಾರ ಹಾಗೂ ವಲಯಧ್ಯಕ್ಷರು, ಮೇಲ್ವಿಚಾರಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು, ಯೋಜನಾಧಿಕಾರಿ ಮೇದಪ್ಪ ನಾವೂರು ಸ್ವಾಗತಿಸಿ, ರವಿಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here