ನಾಳೆ (ಮಾ. 24) ಬೆಟ್ಟಂಪಾಡಿ ದೇವಾಲಯದ ಕಲ್ಯಾಣಿ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

0

ಬೆಟ್ಟಂಪಾಡಿ: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಲ್ಯಾಣಿ (ಕೆರೆ) ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ ಮಾ. 24 ರಂದು ದೇವಾಲಯದ ವಠಾರದಲ್ಲಿ ನಡೆಯಲಿದೆ.

ಪುತ್ತೂರು ತಾಲೂಕು ಪಂಚಾಯತ್ ನರೇಗಾ ಸಹಾಯಕ ನಿರ್ದೇಶಕಿ ಶೈಲಜಾ ಪ್ರಕಾಶ್ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ಬೆಟ್ಟಂಪಾಡಿ ಗ್ರಾ.ಪಂ. ಅಧ್ಯಕ್ಷೆ ಪವಿತ್ರ ಡಿ., ಉಪಾಧ್ಯಕ್ಷ ವಿನೋದ್ ರೈ, ಸದಸ್ಯರುಗಳು ಉಪಸ್ಥಿತರಿರಲಿದ್ದಾರೆ.

ಶ್ರೀ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ಈಗಾಗಲೇ ಸುಸಜ್ಜಿತ ಪಾಕಶಾಲೆ, ಬಿಲ್ವಶ್ರೀ ಸಭಾಂಗಣ, ಅನ್ನಬ್ರಹ್ಮ ಅನ್ನಛತ್ರ ನಿರ್ಮಾಣವಾಗಿ ಲೋಕಾರ್ಪಣೆಗೊಂಡಿದೆ. ಮುಂದಿನ ಹಂತವಾಗಿ ದೇವಳದ ಕಲ್ಯಾಣಿ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ.

LEAVE A REPLY

Please enter your comment!
Please enter your name here