ನಗರಸಭೆ ವಿಶೇಷ ಸಾಮಾನ್ಯ ಸಭೆ, ಅಭಿಲೇಖಾಲಯ ಉದ್ಘಾಟನೆ

0

ಪುತ್ತೂರು: ನಗರಸಭೆ ವಿಶೇಷ ಸಾಮಾನ್ಯ ಸಭೆ ಮತ್ತು ಅಭಿಲೇಖಾಲಯ ಉದ್ಘಾಟನೆ ಮತ್ತು ಸಾರ್ವಜನಿಕ ಸೇವಾ ಕೊಠಡಿಗಳ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮ ಮಾ.23ರಂದು ನಗರಸಭೆಯಲ್ಲಿ ನಡೆಯಿತು.


ನಗರಸಭೆ ವಿಶೇಷ ಸಾಮಾನ್ಯ ಸಭೆಯು ಅಧ್ಯಕ್ಷ ಕೆ.ಜೀವಂಧರ್ ಜೈನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಬಳಿಕ ನಗರಸಭೆ ಮೇಲಂತಸ್ತಿನಲ್ಲಿ ಅಭಿಲೇಖಾಲಯ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಬಳಿಕ ಕೆಳಅಂತಸ್ತಿನಲ್ಲಿ ಸಾರ್ವಜನಿಕರಿಗೆ ಪ್ರಯೋಜವಾಗುವಂತೆ ಬ್ಯಾಂಕಿಂಗ್, ಸಕಾಲ, ಕುಡಿಯುವ ನೀರಿನ ಸರಬರಾಜು ದೂರಿನ ವಿವಿಧ ಸೇವಾ ವಿಭಾದ ಕೊಠಡಿಗಳ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ನಗರಸಭೆ ಉಪಾದ್ಯಕ್ಷೆ ವಿದ್ಯಾ ಆರ್ ಗೌರಿ, ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಚಂದ್ರ, ಪೌರಾಯುಕ್ತ ಮಧು ಎಸ್ ಮನೋಹರ್ ಸಹಿತ ಸದಸ್ಯರುಗಳು ಹಾಗು ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here