ಅನಧಿಕೃತ ಬ್ಯಾನರ್, ಬಂಟಿಂಗ್ಸ್‌ಗಳ ತೆರವಿಗೆ ಡಿಸಿ ಸೂಚನೆ ; ನಗರಸಭೆ ವ್ಯಾಪ್ತಿಯಲ್ಲಿ ತೆರವು ಕಾರ್ಯಾಚರಣೆ

0

ಪುತ್ತೂರು:ಕರ್ನಾಟಕ ಸಾರ್ವತ್ರಿಕ ವಿಧಾನ ಸಭಾ ಚುನಾವಣೆ-2023 ಸದ್ಯದಲ್ಲೇ ಘೋಷಣೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಅಧಿಕೃತ ಜ್ಞಾಪನದಲ್ಲಿ, ಅನಧಿಕೃತ ಬ್ಯಾನರ್, ಬಂಟಿಂಗ್ಸ್, ಜಾಹೀರಾತು ಫಲಕಗಳನ್ನು ತೆರವುಗೊಳಿಸುವ ಬಗ್ಗೆ ಮುಖ್ಯ ಚುನಾವಣಾಧಿಕಾರಿಯವರು ನಿರ್ದೇಶನ ನೀಡಿದಂತೆ ದ.ಕ.ಜಿಲ್ಲಾಧಿಕಾರಿಯವರು ಸೂಚನೆ ನೀಡಿದ್ದಾರೆ.

ಅದರಂತೆ, ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಅನಧಿಕೃತ ಬ್ಯಾನರ್, ಬಂಟಿಂಗ್ಸ್, ಫ್ಲೆಕ್ಸ್, ಗೋಡೆಬರಹಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಮಾ.23ರಂದು ನಡೆದಿದೆ.

LEAVE A REPLY

Please enter your comment!
Please enter your name here