ಭಾರತೀಯ ಸೇನೆಯ ನರ್ಸಿಂಗ್ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆಯಾದ ವಿದ್ಯಾಮಾತಾ ಅಕಾಡೆಮಿಯ ಗಗನ್ ದೀಪಕ್ ಜಿ.ರವರಿಗೆ ಸನ್ಮಾನ

0

ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ’ವಿದ್ಯಾಮಾತಾ ಅಕಾಡೆಮಿ’ಯಲ್ಲಿ ತರಬೇತಿ ಪಡೆದು ಭಾರತೀಯ ಭೂಸೇನೆಯ ನರ್ಸಿಂಗ್ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆಯಾಗಿರುವ ಕಾಸರಗೋಡು ಜಿಲ್ಲೆಯ ಕೂಡ್ಲುವಿನ ಗಗನ್ ದೀಪಕ್.ಜಿ ರವರನ್ನು ಪೊಲೀಸ್ ಉಪ ಅಧೀಕ್ಷಕರಾದ ಡಾ.ವೀರಯ್ಯ ಹಿರೇಮಠ ರವರು ಸನ್ಮಾನಿಸಿದರು.

ವಿವಿಧ ನೇಮಕಾತಿಗಳಿಗೆ ಸಂಬಂಧಿಸಿದಂತೆ ತರಬೇತಿಯಲ್ಲಿರುವ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ ಬಗ್ಗೆ ಉಪಯುಕ್ತ ಸಲಹೆಗಳನ್ನು ನೀಡಿದರು. ವಿದ್ಯಾಮಾತಾ ಅಕಾಡೆಮಿಯ ಮೂಲಕ ವಿವಿಧ ನೇಮಕಾತಿಗಳಲ್ಲಿ ಆಯ್ಕೆಯಾಗಿರುವ ಬಗ್ಗೆ ಸಂಸ್ಥೆಯಿಂದ ಮಾಹಿತಿ ತಿಳಿದುಕೊಂಡು ಎಲ್ಲಾ ಪ್ರಯತ್ನಗಳಲ್ಲಿ ಯಶಸ್ಸುಗೊಳಿಸುವಂತೆ ಶುಭ ಹಾರೈಸಿದರು.

ಡಾ.ವೀರಯ್ಯ ಹಿರೇಮಠರವರನ್ನು ವಿದ್ಯಾಮಾತಾ ಅಕಾಡೆಮಿಯ ನಿರ್ದೇಶಕಿ, ತರಬೇತುದಾರೆ ರಮ್ಯಾ ಭಾಗ್ಯೇಶ್ ರೈರವರು ಸ್ವಾಗತಿಸಿದರು. ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ರವರು ಮತ್ತು ತರಬೇತುದಾರರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here