ಮಾ.26ಕ್ಕೆ ಪುತ್ತೂರಿನಲ್ಲಿ ಯುವ ಜಾಥಾ- ಬಿಜೆಪಿ ಯುವಮೋರ್ಚಾದಿಂದ ಪೂರ್ವಭಾವಿ ಸಭೆ

0

ವಿಟ್ಲ, ಕುಂಬ್ರದಿಂದ ಆಗಮಿಸುವ ಜಾಥಾ ಕಲ್ಲೇಗದಲ್ಲಿ ಸಮಾವೇಶ- ಸಹಜ್ ರೈ ಬಳೆಜ್ಜ

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾ ವತಿಯಿಂದ ಮಾ. 26ರಂದು ಪುತ್ತೂರಿನಲ್ಲಿ ನಡೆಯಲಿರುವ ಯುವ ಜಾಥಾ ಕಾರ್ಯಕ್ರಮದ ಪೂರ್ವಭಾವಿ ಸಭೆ ಮಾ.23ರಂದು ಬಿಜೆಪಿ ಕಚೇರಿಯಲ್ಲಿ ನಡೆಯಿತು.


ಯುವಜಾಥಾ ಕಾರ್ಯಕ್ರಮದ ಸಂಚಾಲಕ ,ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಸಹಜ್ ರೈ ಬಳೆಜ್ಜ ಪ್ರಾಸ್ತಾವಿಕವಾಗಿ ಮಾತನಾಡಿ, ಮಾ.26ರಂದು ಮಧ್ಯಾಹ್ನ 3 ಗಂಟೆಗೆ ಜಾಥಾ ನಡೆಯಲಿದ್ದು, ಜಾಥಾವು ವಿಟ್ಲ ಹಾಗೂ ಕುಂಬ್ರದಿಂದ ಆಗಮಿಸಿ ಕಲ್ಲೇಗದಲ್ಲಿ ಸಮಾವೇಶಗೊಳ್ಳಲಿದ್ದು, ಕಲ್ಲೇಗ ಭಾರತ್ ಮಾತಾ ಸಭಾಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ ಎಂದ ಅವರು ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಬೇಕೆಂದು ಹೇಳಿದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮಪ್ಪ ಶೆಟ್ಟಿ, ಯುವಮೋರ್ಚಾ ಗ್ರಾಮಾಂತರ ಮಂಡಲದ ಅಧ್ಯಕ್ಷ ನವೀನ್ ಪಡ್ನೂರು, ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜಾ ರಾಧಾಕೃಷ್ಣ ಅಳ್ವ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ರತನ್ ರೈ ಕುಂಬ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಿರಿಯರಾದ ಎಸ್ ಅಪ್ಪಯ್ಯ ಮಣಿಯಣಿ, ಜಿಲ್ಲಾ ಪ್ರಭಾರಿ ಯತೀಶ್, ಯುವ ಮೋರ್ಚಾ ನಗರ ಮಂಡಲ ಅಧ್ಯಕ್ಷ ಸಚಿನ್ ಶೆಣೈ , ನಗರಸಭೆ ಉಪಾಧ್ಯಕ್ಷೆ ವಿದ್ಯಾ ಆರ್. ಗೌರಿ, ತಾ.ಪಂ. ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಹಾಗೂ ಯುವಮೋರ್ಚಾ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here