ಮಾ.26: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮಂದಿರದ ಪ್ರತಿಷ್ಠಾ ವರ್ಧಂತ್ಯುತ್ಸವ, ಶ್ರೀ ಸತ್ಯನಾರಾಯಣ ಪೂಜೆ, ಬಿಲ್ಲವ ಗ್ರಾಮ ಸಮಿತಿ ಬೆಳ್ಳಿ ಮಹೋತ್ಸವ

0

ಪುತ್ತೂರು: ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ನೇತೃತ್ವದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮಂದಿರದ ಆಶ್ರಯದಲ್ಲಿ 17ನೇ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಬಿಲ್ಲವ ಗ್ರಾಮ ಸಮಿತಿ ಬೆಳ್ಳಿ ಮಹೋತ್ಸವದ ಅಂಗವಾಗಿ ಗ್ರಾಮ ಸಮಿತಿ ಅಧ್ಯಕ್ಷರುಗಳಿಗೆ ಗೌರವಾರ್ಪಣೆ ಮಾ.26ರಂದು ನಡೆಯಲಿದೆ.

ಬೆಳಿಗ್ಗೆ 6ರಿಂದ ಗಣಹೋಮ, ನವಕ ಕಲಶಾಭಿಷೇಕ, ಬ್ರಹ್ಮಶ್ರೀ ನಾರಾಯಣಗುರು ಸಹಸ್ರನಾಮಾವಳಿ, ಸಾಮೂಹಿಕ ಶ್ರೀಸತ್ಯನಾರಾಯಣ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಲಿದೆ. ಬೆಳಿಗ್ಗೆ 10.30ರಿಂದ ಬೆಳ್ಳಿಮಹೋತ್ಸವ ಸಭಾ ಕಾರ್ಯಕ್ರಮ ನಡೆಯಲಿದ್ದು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಯಾಗಿ ಬೆಂಗಳೂರು ಬಿಲ್ಲವರ ಅಸೋಸಿಯೇಶನ್ ಅಧ್ಯಕ್ಷ ವೇದಕುಮಾರ್ ಭಾಗವಹಿಸಲಿದ್ದಾರೆ. ಬೆಳ್ತಂಗಡಿ ವಿಶ್ರಾಂತ ಪ್ರಾಂಶುಪಾಲ ಎ.ಕೃಷ್ಣಪ್ಪ ಪೂಜಾರಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಪುತ್ತೂರು ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ವರದರಾಜ್, ಬಿಲ್ಲವ ಸಂಘದ ಬಿಲ್ಲವ ಗ್ರಾಮ ಸಂಘಟನಾ ಸಮಿತಿ ಸ್ಥಾಪಕ ಪ್ರಧಾನ ಸಂಚಾಲಕ ನವೀನ್ ಶಿಬರಾಡಿ ಗೌರವ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here