ಪ್ರತಿಷ್ಠಿತ ಮೊಹರೆ ಹನುಮಂತರಾಯ ಪ್ರಶಸ್ತಿ ಪುರಸ್ಕೃತ ಡಾ.ಯು.ಪಿ ಶಿವಾನಂದರಿಗೆ ಸುದ್ದಿ ಸೌಹಾರ್ದ ಸಹಕಾರಿಯಿಂದ ಗೌರವಾರ್ಪಣೆ

0

ಪುತ್ತೂರು: ಪತ್ರಿಕೋದ್ಯಮ ಕ್ಷೇತ್ರದಲ್ಲಿನ ಅಪ್ರತಿಮ ಸೇವೆಗಾಗಿ ರಾಜ್ಯ ಮಟ್ಟದ ಪ್ರತಿಷ್ಠಿತ ಮೊಹರೆ ಹನುಮಂತರಾಯ ಪ್ರಶಸ್ತಿ ಪುರಸ್ಕೃತಗೊಂಡ ಸುದ್ದಿ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ, ಸುದ್ದಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಡಾ.ಯು.ಪಿ ಶಿವಾನಂದರಿಗೆ ಸುದ್ದಿ ಸೌಹಾರ್ದ ಸಹಕಾರಿ ವತಿಯಿಂದ ಮಾ.24 ರಂದು ಸಂಘದ ಆಡಳಿತ ಕಛೇರಿಯಲ್ಲಿ ನಡೆದ ಸಂಘದ ಆಡಳಿತ ಮಂಡಳಿಯ ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಸಂಘದ ನಿರ್ದೇಶಕರುಗಳು ಡಾ.ಯು.ಪಿ ಶಿವಾನಂದರವರಿಗೆ ಶಾಲು, ಫಲಪುಷ್ಪ, ಹೂಗುಚ್ಛ ನೀಡಿ ಗೌರವಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರುಗಳಾದ ಡಾ.ಜೆ.ಸಿ ಅಡಿಗ, ಜೋನ್ ಕುಟಿನ್ಹಾ, ಸುಂದರ ನಾಯ್ಕ್ ಕೆ, ಎನ್.ಕೆ ಜಗನ್ನಿವಾಸ ರಾವ್, ಎ.ವಿ ನಾರಾಯಣ್, ಸ್ವಾತಿ ಮಲ್ಲಾರ, ಫಾರೂಕ್ ಶೇಖ್ ಮುಕ್ವೆ ಉಪಸ್ಥಿತರಿದ್ದರು. ನಿರ್ದೇಶಕ ಶೇಷಪ್ಪ ಕಜೆಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಂ.ನರೇಂದ್ರ ಸ್ವಾಗತಿಸಿ, ವಂದಿಸಿದರು. ಸಿಬ್ಬಂದಿಗಳಾದ ಅನಂತರಾಮ್, ಚೇತನ್ ಸಹಕರಿಸಿದ್ದರು.

LEAVE A REPLY

Please enter your comment!
Please enter your name here