ಶ್ರೀ ಸತ್ಯಸಾಯಿ ಮಂದಿರದಲ್ಲಿ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

0

ಪುತ್ತೂರು : ಶ್ರೀ ಸತ್ಯಸಾಯಿ ಸೇವಾ ಸಮಿತಿ ಪುತ್ತೂರು, ಬೈಂದೂರು ಪ್ರಭಾಕರ ರಾವ್ ಮೆಮೋರಿಯಲ್ ಟ್ರಸ್ಟ್ ಮತ್ತು ಸುಳ್ಯ ಕೆ.ವಿ.ಜಿ ದಂತ ಮಹಾವಿದ್ಯಾಲಯ ವತಿಯಿಂದ 25 ನೇ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಮಾ.26ರಂದು ಪುತ್ತೂರು ಶ್ರೀ ಸತ್ಯಸಾಯಿ ಮಂದಿರದಲ್ಲಿ ನಡೆಯಿತು.


ಸುಳ್ಯ ಕೆವಿಜಿ ದಂತ ಮಹಾವಿದ್ಯಾಲಯದ ಡಾ. ಶಿವಾನಂದ ಕಾರ್ಯಕ್ರಮ ದೀಪ ಬೆಳಗಿಸಿ ಉದ್ಘಾಟಿಸಿ ಶಿಬಿರದ ಬಗ್ಗೆ ಸಲಹೆ ಸೂಚನೆ ನೀಡಿದರು. ಆಶಾ ಪ್ರಾರ್ಥಿಸಿದರು, ಬೈಂದೂರು ಪ್ರಭಾಕರ ರಾವ್ ಮೆಮೋರಿಯಲ್ ಟ್ರಸ್ಟ್‌ನ ಅಧ್ಯಕ್ಷ ಡಾ. ಸತ್ಯಸುಂದರ ರಾವ್ ಸ್ವಾಗತಿಸಿದರು. ಹಿರಿಯರಾದ ಪದ್ಮನಾಭ ನಾಯಕ್ ಕಾರ್ಯಕ್ರಮ ನಿರ್ವಹಿಸಿ ಧನ್ಯವಾದವಿತ್ತರು. ಶ್ರೀ ಸತ್ಯಸಾಯಿ ಸೇವಾ ಸಮಿತಿಯ ಸಂಚಾಲಕ ರಘುನಾಥ ರೈ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here