ಮಾ.30ರಿಂದ ಒಡಿಯೂರು ಸಂಸ್ಥಾನದಲ್ಲಿ ಅಖಂಡ ಭಗವನ್ನಾಮ ಸಂಕೀರ್ತನೆ

0

ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಎ.6ರಂದು ನಡೆಯಲಿರುವ ಶ್ರೀ ಹನುಮೋತ್ಸವದ ಪ್ರಯುಕ್ತ ಮಾ.30ರಂದು ಶ್ರೀ ರಾಮನವಮಿಯ ದಿನ ಸೂರ್ಯೋದಯದಿಂದ ಮೊದಲ್ಗೊಂಡು ಎ.6ರಂದು ಹನುಮಜಯಂತಿಯ ತನಕ ಅಖಂಡ ಭಗವನ್ನಾಮ ಸಂಕೀರ್ತನೆಯು ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ನಡೆಯಲಿದೆ.

ಅವಿಭಜಿತ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಸುಮಾರು 100ಕ್ಕೂ ಮಿಕ್ಕಿ ಭಜನಾ ತಂಡಗಳು ಈ ಅಖಂಡ ಭಗವನ್ನಾಮ ಸಂಕೀರ್ತನೆಯಲ್ಲಿ ಭಾಗವಹಿಸಲಿದೆ ಎಂದು ಸಂಸ್ಥಾನದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here