ಮಾ.29-ಎ.2: ಆತೂರು ಸದಾಶಿವ ಮಹಾಗಣಪತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

0

ರಾಮಕುಂಜ: ಕಡಬ ತಾಲೂಕಿನ ಕೊಯಿಲ ಗ್ರಾಮದ ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮಾ.29ರಿಂದ ಎ.2ರ ತನಕ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಎ.3ರಂದು ಶ್ರೀ ದುಗಲಾಯಿ ದೈವದ ನೇಮೋತ್ಸವ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಯದುಶ್ರೀ ಆನೆಗುಂಡಿ ಹಾಗೂ ಸದಸ್ಯರು ಮತ್ತು ಉತ್ಸವ ಸಮಿತಿಯವರು ತಿಳಿಸಿದ್ದಾರೆ.


ಮಾ.29ರಂದು ಬೆಳಿಗ್ಗೆ 9.30ಕ್ಕೆ ದೇವಸ್ಥಾನದ ಮುಖ್ಯದ್ವಾರದಿಂದ ಶಾಲಾ ಮಕ್ಕಳಿಂದ ಹಾಗೂ ಊರವರಿಂದ ಹಸಿರುವಾಣಿಯು ಮಾತೆಯರ ಪುಷ್ಪಾರ್ಚನೆ ಸ್ವಾಗತದೊಂದಿಗೆ ಆಗಮಿಸಿ ದೇವರಿಗೆ ಸಮರ್ಪಣೆಯಾಗಲಿದೆ. ರಾತ್ರಿ ೮ಕ್ಕೆ ಧ್ವಜಾರೋಹಣ, ಬಲಿ ಹೊರಟು ಉತ್ಸವ, 9ರಿಂದ ಅನ್ನಸಂತರ್ಪಣೆ ನಡೆಯಲಿದೆ.

ಮಾ.30ರಂದು ರಾತ್ರಿ ಬಲಿ ಹೊರಟು ಉತ್ಸವ, ಆತೂರಿನಿಂದ ಗೋಕುಲನಗರ, ಕೆ.ಸಿ.ಫಾರ್ಮ್ ತನಕ ಪೇಟೆ ಸವಾರಿ, ಕಟ್ಟೆಪೂಜೆಗಳು ನಡೆಯಲಿವೆ. ಮಾ.31ರಂದು ಪೂರ್ವಾಹ್ನ 9.30ರಿಂದ ಉತ್ಸವ ಆರಂಭಗೊಂಡು ಮಧ್ಯಾಹ್ನ 12 ಗಂಟೆಗೆ ದರ್ಶನ ಬಲಿ, ಬಟ್ಟಲು ಕಾಣಿಕೆ, ಮಹಾಪೂಜೆ, ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 5ರಿಂದ ಮೂಡಪ್ಪ ಸೇವೆ, ರಾತ್ರಿ 7ಕ್ಕೆ ಬಲಿ ಹೊರಟು ಉತ್ಸವ, ಆನೆಗುಂಡಿಯವರೆಗೆ ಪೇಟೆ ಸವಾರಿ, ಆನೆಗುಂಡಿಯಲ್ಲಿ ಕೆರೆ ಉತ್ಸವ, ಕಟ್ಟೆಪೂಜೆ, ಆನೆಗುಂಡಿ ಬೂಡಿನಿಂದ ದುಗಲಾಯಿ ದೈವದ ಭಂಡಾರ ತರುವ ಕಾರ್ಯಕ್ರಮ, ದೇವಸ್ಥಾನದಲ್ಲಿ ರಂಗಪೂಜೆ ನಡೆಯಲಿದೆ.


ಎ.1ರಂದು ಪೂರ್ವಾಹ್ನ 9ರಿಂದ ಬಲಿಹೊರಟು ಉತ್ಸವ, ರಕ್ತೇಶ್ವರಿ ಮತ್ತು ಹುಲಿ ದೈವಗಳ ನುಡಿಕಟ್ಟುಗಳು, ರಾತ್ರಿ 9ರಿಂದ ಮಹಾರಥೋತ್ಸವ, ಬಳಿಕ ಅಶ್ವತ್ಥ ಕಟ್ಟೆಪೂಜೆ ನಡೆಯಲಿದೆ.

ಎ.2ರಂದು ಪೂರ್ವಾಹ್ನ 7.30ರಿಂದ ಬಾಗಿಲು ತೆರೆಯುವ ಮುಹೂರ್ತ, ಮಹಾಪೂಜೆ, ರಾತ್ರಿ 7ರಿಂದ ಬಲಿ ಹೊರಟು ಉತ್ಸವ, ವಸಂತ ಕಟ್ಟೆಯಲ್ಲಿ ಕಟ್ಟೆಪೂಜೆಗಳು, ಕೊಯಿಲ ಶಾಲೆಯಿಂದಾಗಿ ನೀಲಮೆ ಶ್ರೀ ಮಹಾವಿಷ್ಣು ದೇವಸ್ಥಾನ, ಕುರೋಳಿಕೆ ಮೂಲಕ ಕುಮಾರಧಾರದ ಸುದೆಂಗಳದವರೆಗೆ ಪೇಟೆ ಸವಾರಿ, ಕಟ್ಟೆಪೂಜೆಗಳು, ಗುಳಿಗ ಮತ್ತು ಪಂಜುರ್ಲಿ ದೈವಗಳ ನುಡಿಕಟ್ಟುಗಳು, ಅವಭೃತೋತ್ಸವ, ಧ್ವಜಾವರೋಹಣ, ಮಂತ್ರಾಕ್ಷತೆಯೊಂದಿಗೆ ವಾರ್ಷಿಕ ಜಾತ್ರೆ ಸಂಪನ್ನಗೊಳ್ಳಲಿದೆ.


ಎ.3: ನೇಮೋತ್ಸವ
ಎ.3ರಂದು ಪೂರ್ವಾಹ್ನ 8.30ರಿಂದ ಸಂಪ್ರೋಕ್ಷಣೆ, ಪೂರ್ವಾಹ್ನ 9.30ರಿಂದ ದುಗಲಾಯಿ ದೈವದ ನೇಮೋತ್ಸವ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮ:
ಮಾ.29ರಂದು ಸಂಜೆ 5ರಿಂದ ಯಕ್ಷನಂದನ ಗೋಕುಲನಗರ ಇವರಿಂದ ‘ಶಿವಭಕ್ತ ಪುರುಷಾಮೃಗ’ ತಾಳಮದ್ದಳೆ ನಡೆಯಲಿದೆ. ರಾತ್ರಿ 9.30ರಿಂದ 7ನೇ ವರ್ಷದ ಕಲಾಸೇವೆ ಪ್ರಯುಕ್ತ ಎಸ್‌ಆರ್‌ಕೆ ಲ್ಯಾಡರ್‍ಸ್ ಪುತ್ತೂರು ಇವರ ಪ್ರಾಯೋಜಕತ್ವದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಕಲಾಕುಂಭ ಸಾಂಸ್ಕೃತಿಕ ವೇದಿಕೆ ಕುಳಾಯಿ ಇವರಿಂದ ‘ತುಳುನಾಡ ಸಂಸ್ಕೃತಿ’ ಪ್ರದರ್ಶನಗೊಳ್ಳಲಿದೆ.
ಮಾ.31ರಂದು ಸಂಜೆ 6.30ರಿಂದ ಲಹರಿ ಸಂಗೀತ ಕಲಾಕೇಂದ್ರ ಐಐಸಿಟಿ ನೆಲ್ಯಾಡಿ ಇದರ ವಿದ್ಯಾರ್ಥಿಗಳಿಂದ ‘ರಾಗಾಂತರಂಗ’ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ. ರಾತ್ರಿ 10ರಿಂದ ಶಿವಮೂರ್ತಿ ಮಿತ್ರವೃಂದ ದೇವಗಿರಿ ಕೊಯಿಲ ಇವರ ಪ್ರಾಯೋಜಕತ್ವದಲ್ಲಿ 11ನೇ ವರ್ಷದ ಕಲಾಸೇವೆಯ ಪ್ರಯುಕ್ತ ‘ಅವುದಾಲಾಪುಜಿ’ ತುಳು ತೆಲಿಕೆದ ನಾಟಕ ಪ್ರದರ್ಶನಗೊಳ್ಳಲಿದೆ. ಎ.1ರಂದು ಸಂಜೆ 6ರಿಂದ ದೇವಗಿರಿ ಬಾಲಗೋಕುಲದ(ಧಾರ್ಮಿಕ ಶಿಕ್ಷಣ) ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ಗಂಟೆ 8ರಿಂದ ಹಿರಿಯರಿಗೆ ಸನ್ಮಾನ, ರಾತ್ರಿ ಗಂಟೆ 10ರಿಂದ ಅಂಬಿಕಾ ಅನ್ನಪೂರ್ಣೇಶ್ವರೀ ದಶಾವತಾರ ಯಕ್ಷಗಾನ ಮಂಡಳಿ ಸುಂಕದಕಟ್ಟೆ ಬಜಪೆ ಇವರಿಂದ ‘ಅಜ್ಜೆ ಕೊರಗಜ್ಜೆ’ ತುಳು ಯಕ್ಷಗಾನ ಬಯಲಾಟ ನಡೆಯಲಿದೆ.

LEAVE A REPLY

Please enter your comment!
Please enter your name here