ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಹಿರಿಯ ವಕೀಲ ಉಮೇಶ್ ಕುಮಾರ್ ವೈ ಬುಡೋಳಿ

0

ಪುತ್ತೂರು: ಕರ್ನಾಟಕ ಪ್ರದೇಶ ಜನತಾದಳ (ಜಾತ್ಯಾತೀತ)ದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಹಿರಿಯ ವಕೀಲ ಉಮೇಶ್ ಕುಮಾರ್ ವೈ. ಬುಡೋಳಿಯವರನ್ನು ನೇಮಕ ಮಾಡಿ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂರವರು ಆದೇಶ ಹೊರಡಿಸಿದ್ದಾರೆ.

ಮಾಣಿ ಸಮೀಪದ ಬುಡೋಳಿಯವರಾದ ಉಮೇಶ್ ಕುಮಾರ್ ವೈ.ರವರು ಹಿರಿಯ ವಕೀಲರಾಗಿದ್ದು ಬಂಟ್ವಾಳ ತಾಲೂಕು ಬಾರ್ ಅಸೋಸಿಯೇಶನ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ಜೆ.ಡಿ.ಎಸ್. ಪಕ್ಷದಲ್ಲಿ ವಿದ್ಯಾರ್ಥಿ ದೆಸೆಯಿಂದಲೇ ಗುರುತಿಸಿಕೊಂಡಿದ್ದು ಯುವ ಜನತಾದಳ ದ.ಕ. ಜಿಲ್ಲಾ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದ ಉಮೇಶ್ ಕುಮಾರ್ ವೈ. ಯವರು ನಂತರ ಜೆ.ಡಿ.ಎಸ್.ನ ಹಲವಾರು ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here