ಆತೂರು ಸದಾಶಿವ ಮಹಾಗಣಪತಿ ದೇವಸ್ಥಾನದ ವರ್ಷಾವಧಿ ಜಾತ್ರೆ-ಹೊರೆಕಾಣಿಕೆ ಸಮರ್ಪಣೆ

0

ರಾಮಕುಂಜ; ಕಡಬ ತಾಲೂಕಿನ ಕೊಯಿಲ ಗ್ರಾಮದ ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.29ರಂದು ಬೆಳಿಗ್ಗೆ ಶಾಲಾ ಮಕ್ಕಳಿಂದ ಹಾಗೂ ಊರವರಿಂದ ಹಸಿರುವಾಣಿ ಸಮರ್ಪಣೆ ನಡೆಯಿತು.


ದೇವಗಿರಿ ವೃತ್ತದಿಂದ ಹಸಿರುವಾಣಿ ಮೆರವಣಿಗೆ ಆರಂಭಗೊಂಡಿತು. ಸಬಳೂರು ಅಯೋಧ್ಯಾನಗರ ಶ್ರೀರಾಮ ಭಜನಾ ಮಂಡಳಿಯ ಮಹಿಳಾ ಮತ್ತು ಮಕ್ಕಳ ತಂಡದಿಂದ ಕುಣಿತ ಭಜನೆ, ಚಾರ್ವಾಕ ಸಿಂಗಾರಿ ಮೇಳದಿಂದ ಚೆಂಡೆ, ವಾದ್ಯಗಳೊಂದಿಗೆ ಹೊರೆಕಾಣಿಕೆ ಮೆರವಣಿಗೆಯು ದೇವಾಲಯಕ್ಕೆ ಆಗಮಿಸಿತು. ಮೆರವಣಿಗೆಗೆ ಮಾತೆಯರು ಪುಷ್ಪಾರ್ಚನೆ ಮಾಡಿ ಸ್ವಾಗತಿಸಿದರು. ದೇವಸ್ಥಾನದ ಪವಿತ್ರಪಾಣಿ ವೆಂಕಟ್ರಮಣ ಕುದ್ರೆತ್ತಾಯ, ಅರ್ಚಕ ವಿಷ್ಣುಮೂರ್ತಿ ಬಡೆಕ್ಕಿಲ್ಲಾಯರವರು ಪೂಜಾ ವಿಧಿವಿಧಾನ ನೆರವೇರಿಸಿದರು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಯದುಶ್ರೀ ಆನೆಗುಂಡಿ, ಸದಸ್ಯರಾದ ಬಾಲಕೃಷ್ಣ ನಾಯ್ಕ ಏಣಿತ್ತಡ್ಕ, ವನಜ ಪಲ್ಲಡ್ಕ, ಮೋಹಿನಿ ಪಾನ್ಯೇಲು, ಮುರಳಿಕೃಷ್ಣ ಕೆ.ಬಡಿಲ, ವಿನಯಕುಮಾರ್ ರೈ ಕೊಯಿಲಪಟ್ಟೆ, ಶ್ರೀರಾಮ ಕೆಮ್ಮಾರ, ಸಂಜೀವ ಗೌಡ ಕೊನೆಮಜಲು, ಉತ್ಸವ ಸಮಿತಿ ಉಪಾಧ್ಯಕ್ಷರಾದ ಧರ್ಣಪ್ಪ ಗೌಡ ಕೋರಿಕ್ಕಾರು, ಪಾಂಡೇಲುಗುತ್ತು ಚಂದ್ರಹಾಸ ರೈ ಬುಡಲೂರು, ಮೋಹನದಾಸ ಶೆಟ್ಟಿ ಬಡಿಲ, ರಾಮಚಂದ್ರ ಏಣಿತ್ತಡ್ಕ, ರಾಜೀವ ಗೌಡ ಪೊಸಲಕ್ಕೆ, ರುಕ್ಮಯ ಪಲ್ಲಡ್ಕ, ದಾಮಣ್ಣ ಗೌಡ ಕಾಯರಕಟ್ಟ, ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಅಂಬಾ, ಕಾರ್ಯದರ್ಶಿಗಳಾದ ಶಾಂತರಾಮ ಬೇಂಗದಪಡ್ಪು, ಮದುಸೂದನ್ ಪೆರ್ಲ, ತಿಮ್ಮಪ್ಪ ಸಂಕೇಶ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಶೀನಪ್ಪ ಗೌಡ ವಳಕಡಮ, ಪ್ರಧಾನ ಕಾರ್ಯದರ್ಶಿ ಚೇತನ್ ಆನೆಗುಂಡಿ, ಉಪಾಧ್ಯಕ್ಷರಾದ ಜಗನ್ನಾಥ ಶೆಟ್ಟಿ ಕಾರೆಗುಡ್ಡೆ, ಭವಾನಿಶಂಕರ್ ಪರಂಗಾಜೆ, ರಾಮ್ ನಾಯ್ಕ್ ಏಣಿತ್ತಡ್ಕ, ಬಾಲಕೃಷ್ಣ ಗೌಡ ಬೇಂಗದಪಡ್ಪು, ಕಾರ್ಯಕಾರಿ ಸಮಿತಿ ಸದಸ್ಯರಾದ ವಿನೋಧರ ಗೌಡ ಮಾಳ, ರಾಮಯ್ಯ ಗೌಡ ಬುಡಲೂರು, ಕೆ.ಎಸ್.ಬಾಲಕೃಷ್ಣ ಕೊಯಿಲ, ಸುಭಾಸ್ ಶೆಟ್ಟಿ ಆರುವಾರ, ಸುಧೀಶ ಪಟ್ಟೆ ಪಲ್ಲಡ್ಕ, ದಿನೇಶ್ ಗೌಡ ಊರಾಜೆ, ಸುಂದರ ಕೋರಿಕ್ಕಾರು, ಲಕ್ಷ್ಮೀನಾರಾಯಣ ರಾವ್ ಆತೂರು, ಅಶೋಕ್ ಗೋಕುಲನಗರ, ಕಾರ್ಯದರ್ಶಿ ರಾಧಾಕೃಷ್ಣ ತುಂಬೆತ್ತಡ್ಕ, ಜೊತೆ ಕಾರ್ಯದರ್ಶಿಗಳಾದ ಆನಂದ ಎಸ್.ಟಿ.ಕೆಮ್ಮಾರ, ಉಮೇಶ್ ಸಂಕೇಶ, ಶಾಂತರಾಮ್ ಬೇಂಗದಪಡ್ಲು, ಹರೀಂದ್ರ ಊರಾಜೆ ವಳಕಡಮ, ಸಚಿನ್ ಪಲ್ಲಡ್ಕ ಪಟ್ಟೆ, ಪ್ರವೀಣ್‌ರಾಜ್ ಕೆ.ಎಸ್.ಕೊಲ್ಯ ಸೇರಿದಂತೆ ವಿವಿಧ ಉಪಸಮಿತಿಯವರು, ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here