ದ.ಕ.ಜಿಲ್ಲಾ ಯಂಗ್ ಬ್ರಿಗೇಡ್ ಸೇವಾದಳದ ಅಧ್ಯಕ್ಷರಾಗಿ ರಂಜಿತ್ ಬಂಗೇರ ಆಯ್ಕೆ

0

ಪುತ್ತೂರು: ದ.ಕ.ಜಿಲ್ಲಾ ಯಂಗ್ ಬ್ರಿಗೇಡ್ ಸೇವಾದಳದ ಅಧ್ಯಕ್ಷರಾಗಿ ರಂಜಿತ್ ಬಂಗೇರ ನೇಮಕಗೊಂಡಿದ್ದಾರೆ. ಯಂಗ್‌ಬ್ರಿಗೇಡ್ ಸೇವಾದಳದ ರಾಜ್ಯಾಧ್ಯಕ್ಷ ಪಿ.ಕೆ.ಜುನೈದ್ ನೇಮಕಗೊಳಿಸಿ ಆದೇಶಿಸಿದ್ದಾರೆ.

ಜಿಲ್ಲಾ ಯುವಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಪುತ್ತೂರು ಬ್ಲಾಕ್ ಯುವ ಬ್ರಿಗೇಡ್ ಸೇವಾದಳ ಅಧ್ಯಕ್ಷ ಆಗಿದ್ದ ಇವರು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಸದಸ್ಯರಾಗಿ, ಪುತ್ತೂರು ಪಿಲಿರಂಗ್ ಸಮಿತಿ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಇವರು ಇನ್ನಿತರ ಸಂಘಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಯಂಗ್‌ಬ್ರಿಗೇಡ್ ವತಿಯಿಂದ ಇತ್ತಿಚೆಗೆ ರಕ್ತದಾನ ಶಿಬಿರ ಹಾಗೂ ಕ್ರಿಕೆಟ್ ಪಂದ್ಯಾಟ ಆಯೋಜಿಸಿದ್ದರು.

LEAVE A REPLY

Please enter your comment!
Please enter your name here