ಎ.1,2: ಮುಂಡೂರು ಶ್ರೀಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನೆಯ ಪರಿಹಾರ ಕಾರ್ಯಕ್ರಮ, ಚಂಡಿಕಾ ಹೋಮ

0

ಪುತ್ತೂರು: ಮುಂಡೂರು ಶ್ರೀಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಎ.1 ಮತ್ತು 2ರಂದು ಅಷ್ಟಮಂಗಲ ಪ್ರಶ್ನೆಯ ಪರಿಹಾರ ಕಾರ್ಯಕ್ರಮಗಳು ಮತ್ತು ಚಂಡಿಕಾಹೋಮ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿರವರ ನೇತೃತ್ವದಲ್ಲಿ ನಡೆಯಲಿದೆ.

ಎ.1ರಂದು ಬೆಳಿಗ್ಗೆ 7.30ರಿಂದ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹವಾಚನ, ಚಂಡಿಕಾ ಹೋಮದ ಪ್ರಾರಂಭ, ಗಣಪತಿ ಹೋಮ, ಚಂಡಿಕಾ ಹೋಮ ಪೂರ್ಣಾಹುತಿ, ಸುವಾಸಿನಿ ಆರಾಧನೆ, ಅನ್ನಸಂತರ್ಪಣೆ, ಸಂಜೆ ಅಘೋರ ಹೋಮ, ಆವಾಹನೆ, ಬಾಧಾಕರ್ಷಣೆ, ಉಚ್ಚಾಟನೆ, ಪ್ರಸಾದ ವಿತರಣೆ ನಡೆಯಲಿದೆ. ಎ.2ರಂದು ಬೆಳಿಗ್ಗೆ 7ರಿಂದ ಮಹಾಗಣಪತಿಹೋಮ, ತಿಲಹೋಮ, ಸಾಯುಜ್ಯ ಪೂಜೆ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here