ಕಾಣಿಯೂರು- ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

0

ಕಾಣಿಯೂರು: ಕಾಣಿಯೂರು ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿಯ ಆಶ್ರಯದಲ್ಲಿ 47ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ನಡೆಯಿತು.

ಅರ್ಚಕರಾದ ಪದ್ಮನಾಭ ಭಟ್ ಕಟ್ಟತ್ತಾರು ಹಾಗೂ ಅನಂತರಾಮ ಉಪಾಧ್ಯಾಯ ತುಂಬ್ಯರವರು ಪೂಜಾ ವಿಧಿವಿಧಾನವನ್ನು ನೆರವೇರಿಸಿದರು. ಭಜನಾ ಮಂಡಳಿಯ ಗೌರವಾಧ್ಯಕ್ಷ ಚಿದಾನಂದ ಉಪಾಧ್ಯಾಯ ಕಲ್ಪಡ, ಅಧ್ಯಕ್ಷ ವಾಸುದೇವ ನಾಯ್ಕ್ ತೋಟ, ಕಾರ್ಯದರ್ಶಿ ಜಯಂತ ಅಬೀರ, ಕೋಶಾಧಿಕಾರಿ ಲಕ್ಷ್ಮಣ ಗೌಡ ಮುಗರಂಜ ಹಾಗೂ ಭಜನಾ ಮಂಡಳಿಯ ಪದಾಧಿಕಾರಿಗಳು, ಸದಸ್ಯರು ಸೇರಿದಂತೆ ಹಲವಾರು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here