ಸುದಾನ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ

0

ಪುತ್ತೂರು : ಪುತ್ತೂರಿನ ವಸತಿ ಶಾಲೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳ ಶಿಕ್ಷಕ-ರಕ್ಷಕ ಸಂಘದ ಸಭೆಯು ಇತ್ತೀಚೆಗೆ ನಡೆಯಿತು.

ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷ ಡಾ| ರಾಜೇಶ್ ಬೆಜ್ಜಂಗಳ ಮಾತನಾಡಿ ‘ಮಾನವೀಯ ಮೌಲ್ಯಗಳನ್ನು, ಜೀವನದ ಗುರಿ ತಲುಪುವುದುದಕ್ಕೆ ಅಗತ್ಯವಾದ ದೃಢತೆಯನ್ನು ಮೈಗೂಡಿಸಿ ಕೊಳ್ಳುವಂತೆ ಕರೆ ನೀಡಿದರು.

ಸಭಾದ್ಯಕ್ಷತೆಯನ್ನು ವಹಿಸಿದ್ದ ಶಾಲಾ ಮುಖ್ಯ ಶಿಕ್ಷಕಿ ಶೋಭಾ ನಾಗರಾಜ್ ರವರು ಪರೀಕ್ಷಾ ಸಂದರ್ಭದಲ್ಲಿ ವಹಿಸಬೇಕಾದ ಎಚ್ಚರಿಕೆ, ಪರೀಕ್ಷಾ ಸಿದ್ಧತೆಗಳ ಬಗೆಗೆ ಮಾಹಿತಿ ನೀಡಿ, ಶುಭ ಹಾರೈಸಿದರು. ಶಾಲಾ ಉಪಮುಖ್ಯ ಶಿಕ್ಷಕಿ ಲವೀನಾ ರೋಸ್ಲಿನ್ ಹನ್ಸ್ ರವರು ಮತ್ತು ಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು. ಸಹಶಿಕ್ಷಕಿ ಜಯಸ್ಮಿತಾ ಕಾರ್ಯಕ್ರ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here