ಕನ್ನಡಪ್ರಭ-ಏಷ್ಯಾನೆಟ್ ಸುವರ್ಣ ನ್ಯೂಸ್‌ನ ಉಜ್ವಲ ಉದ್ಯಮಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನೃತೋಪಾಸನಾ ನೃತ್ಯ ಮೆರುಗು!

0

-ಪುತ್ತೂರು: ಮಂಗಳೂರು ಮರೋಳಿಯ ಸೂರ್ಯವುಡ್ಸ್ ಕನ್ವೆನ್ಶನ್ಸೆಂಟರ್‌ನಲ್ಲಿ ಇತ್ತೀಚೆಗೆ ನಡೆದ ಕನ್ನಡಪ್ರಭ-ಏಷ್ಯಾನೆಟ್ ಸುವರ್ಣ ನ್ಯೂಸ್‌ ವತಿಯಿಂದ ಇದೇ ಮೊದಲ ಬಾರಿಗೆ ನಡೆದ ಕರಾವಳಿ ಆವೃತ್ತಿಯ `ಉಜ್ವಲ ಉದ್ಯಮಿ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುತ್ತೂರಿನ ನೃತೋಪಾಸನಾ ಕಲಾ ಕೇಂದ್ರ ನೃತ್ಯ ತಂಡದಿಂದ ವಿಶೇಷ ನೃತ್ಯ ಪ್ರದರ್ಶನ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.


ನೃತ್ಯಗುರು, ವಿದುಷಿ ಶಾಲಿನಿ ಆತ್ಮಭೂಷಣ್ ನಿರ್ದೇಶನದಲ್ಲಿ ಕಲಾ ತಂಡದ ವಿದ್ಯಾರ್ಥಿಗಳು ವಿಶೇಷ ಸಂಯೋಜನೆಯಲ್ಲಿ ನೃತ್ಯ ವೈವಿಧ್ಯ ಪ್ರದರ್ಶಿಸಿದರು.
ಸಮಾರಂಭದ ಉದ್ಘಾಟಕ, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ನೃತ್ಯ ತಂಡಕ್ಕೆ ಸ್ಮರಣಿಕೆ ನೀಡಿದರು. ಕರ್ಣಾಟಕ ಬ್ಯಾಂಕಿನ ಸ್ವತಂತ್ರ ನಿರ್ದೇಶಕ ಜೀವನ್‌ದಾಸ್ ನಾರಾಯಣ್, ಖ್ಯಾತ ನಟಿ ಮನ್ವಿತಾ ಕಾಮತ್, ಕನ್ನಡಪ್ರಭ-ಏಷ್ಯಾನೆಟ್ ಸುವರ್ಣ ನ್ಯೂಸ್ ಪ್ರಧಾನ ಸಂಪಾದಕ ರವಿ ಹೆಗಡೆ, ಏಷ್ಯಾನೆಟ್ ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here