ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಾರಾಯಣಕ್ಕೆ ಚಾಲನೆ

0

ಪುತ್ತೂರು: ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ 2024ನೇ ಮಾರ್ಚ್ 20ರಿಂದ ಮಾ.25ರ ವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವ ಯಶಸ್ವಿಯಾಗಿ ನೆರವೇರಬೇಕೆನ್ನುವ ಸಂಕಲ್ಪದೊಂದಿಗೆ ಸಾಮೂಹಿಕ ವಿಷ್ಣು ಸಹಸ್ರನಾಮ ಪಾರಾಯಣಕ್ಕೆ ಎ.2ರಂದು ಬೆಳಗ್ಗೆ ಕ್ಷೇತ್ರದ ಪ್ರಧಾನ ಅರ್ಚಕರಾದ ಕೃಷ್ಣ ಬಡಿಕಿಲ್ಲಾಯರವರು ಚಾಲನೆ ನೀಡಿದರು.

ಊರಪರವೂರ ಹಲವು ಭಕ್ತಾದಿಗಳು ಪಾರಾಯಣದಲ್ಲಿ ಭಾಗವಹಿಸಿದರು‌. ಮುಂದಿನ ದಿನಗಳಲ್ಲಿ ಪ್ರತಿ ತಿಂಗಳ ಪ್ರಥಮ ಭಾನುವಾರ ಸಾಮೂಹಿಕ ವಿಷ್ಣು ಸಹಸ್ರನಾಮ ಪಾರಾಯಣ ಜರಗಲಿದ್ದು, ಇದು ಬ್ರಹ್ಮಕಲಶದವರೆಗೆ ಮುಂದುವರೆಯಲಿದೆ.

ಈಗಾಗಲೇ ಕ್ಷೇತ್ರದಲ್ಲಿ ಲಕ್ಷ ಪ್ರದಕ್ಷಿಣೆ ಸಂಕಲ್ಪ ಚಾಲನೆ ದೊರೆತಿದ್ದು, ಹಲವಾರು ಭಕ್ತಾದಿಗಳು ಭಾಗವಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here