ದೇವಸ್ಥಾನ, ಮಸೀದಿ, ಚರ್ಚ್ ಸಹಿತ 50ಕ್ಕೂ ಅಧಿಕ ಧಾರ್ಮಿಕ ಕೇಂದ್ರಗಳಲ್ಲಿ ಸಾಮೂಹಿಕ ಪೂಜೆ

0
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಶೋಕ್ ರೈ ಅವರ ಪತ್ನಿ ಸುಮಾ ಅಶೋಕ್ ರೈ ಪೂಜೆ ಸಲ್ಲಿಸಿದರು.

ಅಶೋಕ್ ರೈಯವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಸಿಗುವಂತಾಗಲು ಪ್ರಾರ್ಥನೆ

ಪುತ್ತೂರು: ಮೇ 10ರಂದು ನಡೆಯಲಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಕೋಡಿಂಬಾಡಿ ರೈ ಎಸ್ಟೇಟ್ ಮಾಲಕರಾದ ರೈ ಎಸ್ಟೇಟ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಪ್ರವರ್ತಕ ಅಶೋಕ್ ಕುಮಾರ್ ರೈಯವರಿಗೆ ಅವಕಾಶ ದೊರೆಯಬೇಕು ಮತ್ತು ಅಶೋಕ್ ಕುಮಾರ್ ರೈಯವರು ಚುನಾವಣೆಯಲ್ಲಿ ಜಯಗಳಿಸಬೇಕು ಎಂದು ಅವರ ಅಭಿಮಾನಿಗಳು ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ.

ಎ.3ರಂದು ತಾಲೂಕಿನ ಐವತ್ತಕ್ಕೂ ಅಧಿಕ ದೇವಸ್ಥಾನ, ಮಸೀದಿ, ಚರ್ಚುಗಳಲ್ಲಿ ಅಶೋಕ್ ಕುಮಾರ್ ರೈಯವರ ಅಭಿಮಾನಿಗಳು ಪೂಜೆ ಸಲ್ಲಿಸಿದ್ದು ಅಶೋಕ್ ರೈಯವರ ರಾಜಕೀಯ ಭವಿಷ್ಯ ಉಜ್ವಲವಾಗಿರಬೇಕು ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ.

ಕೋಡಿಂಬಾಡಿ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನ

ಜಾತಿ, ಧರ್ಮ ಮರೆತು ಅಶೋಕ್ ಕುಮಾರ್ ರೈ ಅಭಿಮಾನಿಗಳು ಧಾರ್ಮಿಕ ಕೇಂದ್ರಗಳಲ್ಲಿ ಒಟ್ಟು ಸೇರಿ ಪ್ರಾರ್ಥನೆ ನೆರವೇರಿಸಿದ್ದಾರೆ.

ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠ

LEAVE A REPLY

Please enter your comment!
Please enter your name here