ಆತೂರು ಜಾತ್ರೆ; ದುಗಲಾಯಿ ದೈವದ ನೇಮೋತ್ಸವ

0

ರಾಮಕುಂಜ: ಕಡಬ ತಾಲೂಕಿನ ಕೊಯಿಲ ಗ್ರಾಮದ ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ನಡೆದ ವರ್ಷಾವಧಿ ಜಾತ್ರೆ ಬಳಿಕ ಎ.3ರಂದು ಶ್ರೀ ದುಗಲಾಯಿ ದೈವದ ನೇಮೋತ್ಸವ ನಡೆಯಿತು.

ಎ.2ರಂದು ಸಂಜೆ ದೇವಸ್ಥಾನದಿಂದ ಕುಮಾರಧಾರ ನದಿಯ ಸದೆಂಗಳದವರೆಗೆ ದೇವರ ಪೇಟೆ ಸವಾರಿ, ಕಟ್ಟೆಪೂಜೆಗಳು ನಡೆಯಿತು. ಗುಳಿಗ ಹಾಗೂ ಪಂಜುರ್ಲಿ ದೈವಗಳ ನುಡಿಕಟ್ಟು ನಡೆದು ದೇವರ ಅವಭೃತೋತ್ಸವ ನಡೆಯಿತು. ಬಳಿಕ ದೇವಸ್ಥಾನದಲ್ಲಿ ಧ್ವಜಾವರೋಹಣದೊಂದಿಗೆ ಜಾತ್ರೋತ್ಸವ ಸಂಪನ್ನಗೊಂಡಿತು.

ಎ.3ರಂದು ಬೆಳಿಗ್ಗೆ ಸಂಪ್ರೋಕ್ಷಣೆ ನಡೆಯಿತು. ಬಳಿಕ ಬೆಳಿಗ್ಗೆ 9.30ರಿಂದ ಶ್ರೀ ದುಗಲಾಯಿ ದೈವದ ನೇಮೋತ್ಸವ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಯದುಶ್ರೀ ಆನೆಗುಂಡಿ, ಸದಸ್ಯರು, ಉತ್ಸವ ಸಮಿತಿ ಉಪಾಧ್ಯಕ್ಷರು, ಅಭಿವೃದ್ಧಿ ಸಮಿತಿ ಅಧ್ಯಕ್ಷ ಶೀನಪ್ಪ ಗೌಡ ವಳಕಡಮ, ಪ್ರಧಾನ ಕಾರ್ಯದರ್ಶಿ ಚೇತನ್ ಆನೆಗುಂಡಿ ಹಾಗೂ ಸಮಿತಿ ಪದಾಧಿಕಾರಿಗಳು, ಸದಸ್ಯರು, ವಿವಿಧ ಉಪಸಮಿತಿಗಳ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here