ಭಗವಾನ್ ಮಹಾವೀರ ಇಡಿ ವಿಶ್ವಕ್ಕೆ ಶಾಂತಿಯ ಸಂದೇಶ ನೀಡಿದವರು; ಮಹಾವೀರ ಜಯಂತಿ ಕಾರ್ಯಕ್ರಮದಲ್ಲಿ ಸಹಾಯಕ ಕಮೀಷನರ್ ಗಿರೀಶ್ ನಂದನ್

0

ಪುತ್ತೂರು: ಭಗವಾನ್ ಮಹಾವೀರರು ಇಡಿ ವಿಶ್ವಕ್ಕೆ ಶಾಂತಿಯ ಸಂದೇಶ ನೀಡಿದವರು. ಅವರ ಸತ್ಯ ಅಹಿಂಸಾ ತತ್ವಾದರ್ಶಗಳನ್ನು ನಾವು ಪಾಲನೆ ಮಾಡಬೇಕೆಂದು ಸಹಾಯಕ ಕಮೀಷನರ್ ಗಿರೀಶ್ ನಂದನ್ ಅವರು ಹೇಳಿದರು.

ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ ಎ.4ರಂದು ತಾಲೂಕು ಆಡಳಿತ ಸೌಧದ ತಹಸೀಲ್ದಾರ್ ಸಭಾಂಗಣದಲ್ಲಿ ನಡೆದ ಶ್ರೀ ಭಗವಾನ್ ಮಹಾವೀರ ಜಯಂತಿ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಭಗವಾನ್ ಮಹಾವೀರ ಅವರ ಭಾವ ಚಿತ್ರದ ಎದುರು ದೀಪ ಪ್ರಜ್ವಲಿಸಿ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ತಹಸೀಲ್ದಾರ್ ಜಿ ಶಿವಶಂಕರ್, ತಾ.ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಡಿವೈಎಸ್ಪಿ ಡಾ| ವೀರಯ್ಯ ಹಿರೇಮಠ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ಉಪ ತಹಸೀಲ್ದಾರ್ ಸುಲೋಚನಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here