ಎ.6: ನಿಂತಿಕಲ್ಲು ಸಾಧನ ಸಹಕಾರ ಸೌಧದಲ್ಲಿ ಬಂಟಸಿರಿ ವಿವಿಧೋದ್ದೇಶ ಸಹಕಾರ ಸಂಘದ 4 ನೇ ನೂತನ ಶಾಖೆ ಉದ್ಘಾಟನೆ

0

ಪುತ್ತೂರು: ಪುತ್ತೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಬಂಟಸಿರಿ ವಿವಿಧೋದ್ದೇಶ ಸಹಕಾರ ಸಂಘದ 4 ನೇ ನೂತನ ಶಾಖೆ ಎ. 6 ರಂದು ಬೆಳಿಗ್ಗೆ 10 ಕ್ಕೆ ನಿಂತಿಕಲ್ಲು ಸಾಧನ ಸಹಕಾರ ಸೌಧದಲ್ಲಿ ಉದ್ಘಾಟನೆಯಾಗಲಿದೆ.


ಮಂಗಳೂರು ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಕೆ.ಜೈರಾಜ್ ಬಿ.ರೈಯವರು ನಿಂತಿಕಲ್ಲು ಶಾಖೆಯ ಉದ್ಘಾಟನೆ ಹಾಗೂ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಬಂಟಸಿರಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಜಗನ್ನಾಥ ರೈ ಮಾದೋಡಿಯವರು ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟುರವರು ಭದ್ರತಾ ಖಜಾನೆ ಉದ್ಘಾಟನೆ ಮಾಡಲಿದ್ದಾರೆ. ಸುಳ್ಯ ತಾಲೂಕು ಬಂಟರ ಸಂಘದ ಅಧ್ಯಕ್ಷ ಎನ್.ಜಯಪ್ರಕಾಶ್ ರೈಯವರು ಗಣಕ ಯಂತ್ರ ಉದ್ಘಾಟನೆ ಮಾಡಲಿದ್ದಾರೆ. ಮುರುಳ್ಯ-ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಗೌಡ ಹೆಚ್‌ರವರು ಠೇವಣಿ ಪತ್ರ ಬಿಡುಗಡೆ ಮಾಡಲಿದ್ದಾರೆ.

ಅತಿಥಿಗಳಾಗಿ ಪುತ್ತೂರು ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಸವಣೂರು ಕೆ.ಸೀತಾರಾಮ ರೈ, ಸಹಕಾರ ಸಂಘಗಳ ಇಲಾಖೆ ಬೆಂಗಳೂರು ಇದರ ಜಂಟಿ ನಿಬಂಧಕ ಪ್ರವೀಣ್ ಬಿ,ನಾಯಕ್, ಸಹಕಾರಿ ಮುಂದಾಳು ರಮೇಶ್ ಕೋಟೆ, ತಾ.ಪಂ. ಮಾಜಿ ಸದಸ್ಯ ಗಪೂರ್‌ರವರುಗಳು ಭಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಜಗನ್ನಾಥ ರೈ ಮಾದೋಡಿ, ಉಪಾಧ್ಯಕ್ಷ ಅರಿಯಡ್ಕ ಲಕ್ಷ್ಮೀನಾರಾಯಣ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ರೈ ನಡುಬೈಲು ಹಾಗೂ ಶಾಖಾ ಮೇನೇಜರ್ ಪ್ರೀತಮ್ ಶೆಟ್ಟಿರವರುಗಳು ತಿಳಿಸಿದ್ದಾರೆ.

ಸೀತಾರಾಮ ರೈ ಸವಣೂರು ಹಾಗೂ ಚನಿಲ ತಿಮ್ಮಪ್ಪ ಶೆಟ್ಟಿಯವರಿಗೆ ಸನ್ಮಾನ
ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸವಣೂರು ಕೆ.ಸೀತಾರಾಮ ರೈ ಮತ್ತು ಕರ್ನಾಟಕ ಸರಕಾರದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿರವರಿಗೆ ಬಂಟಸಿರಿ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಸನ್ಮಾನ ಕಾರ್‍ಯಕ್ರಮ ಈ ಸಂದರ್ಭದಲ್ಲಿ ನಡೆಯಲಿದೆ

LEAVE A REPLY

Please enter your comment!
Please enter your name here