ಕೆಪಿಸಿಸಿಗೆ ನೇಮಕ

0


ಉಪ್ಪಿನಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ವಿಭಾಗದ ಕಾರ್ಯದರ್ಶಿಯಾಗಿ ನಝೀರ್ ಮಠ ನೇಮಕಗೊಂಡಿದ್ದಾರೆ.


ಎಐಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಇಮ್ರಾನ್ ಪ್ರತಾಪ್‌ಗಿರಿ ಅವರ ಆದೇಶದ ಮೇರೆಗೆ ಕೆಪಿಸಿಸಿಯ ಅಲ್ಪಸಂಖ್ಯಾತವಿಭಾಗದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಅವರು ನಝೀರ್ ಮಠ ಅವರನ್ನು ನೇಮಕಾತಿಗೊಳಿಸಿ ಆದೇಶಿಸಿದ್ದಾರೆ. ಉಪ್ಪಿನಂಗಡಿ ಮಠದ ನಝೀರ್ ಮಠ ಅವರು, ಕರ್ನಾಟಕ ವಿದ್ಯಾರ್ಥಿ ಕಾಂಗ್ರೆಸ್‌ನ ಮಾಜಿ ಕಾರ್ಯದರ್ಶಿಯಾಗಿ, ಕೆಪಿಸಿಸಿ ಕಾರ್ಮಿಕ (ಇಂಟಕ್) ಮಾಜಿ ಕಾರ್ಯದರ್ಶಿಯಾಗಿ, ದಕ್ಷಿಣ ಕನ್ನಡ ಮುಸ್ಲಿಂ ಯೂತ್ ಕೌನ್ಸಿಲ್‌ನ ಸ್ಥಾಪಕಾಧ್ಯಕ್ಷರಾಗಿ, ದ.ಕ. ಜಿಲ್ಲಾ ವಕ್ಫ್ ಸಮಿತಿಯ ಸದಸ್ಯರಾಗಿ, ಮಠ ಬದ್ರಿಯಾ ಜುಮಾ ಮಸೀದಿಯ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಉಪ್ಪಿನಂಗಡಿಯ ಅರಫಾ ವಿದ್ಯಾಕೇಂದ್ರದ ನಿರ್ದೇಶಕರಾಗಿ ಹಾಗೂ ಉಬಾರ್ ಸ್ಫೋರ್ಸಿಂಗ್ ಕ್ಲಬ್‌ನ ಗೌರವಾಧ್ಯಕ್ಷರಾಗಿರುವುದಲ್ಲದೆ, ಜಿಲ್ಲೆಯ ವಿವಿಧ ಧಾರ್ಮಿಕ, ಸಾಮಾಜಿಕ ಸಂಘಟನೆಗಳ ಪದಾಧಿಕಾರಿಗಳು ಆಗಿದ್ದಾರೆ.

LEAVE A REPLY

Please enter your comment!
Please enter your name here