ಗಂಗಾ ಪಾದೆಕಲ್ಲು ಅವರಿಗೆ ನಿರಂಜನ ಪ್ರಶಸ್ತಿ

0

ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ), ಪುತ್ತೂರು ಇದರ ಶಿವರಾಮಕಾರಂತ ಅಧ್ಯಯನ ಕೇಂದ್ರದಿಂದ ಕೊಡಮಾಡುವ ನಿರಂಜನ ಪ್ರಶಸ್ತಿಗೆ ಈ ವರ್ಷ ಕತೆಗಾರರು, ಕಾದಂಬರಿಕಾರರಾದ ಗಂಗಾ ಪಾದೇಕಲ್‌ ರವರು ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಿರಂಜನ ಪ್ರಶಸ್ತಿಯು ಮೊತ್ತ ರೂಪಾಯಿ 15,೦೦೦.೦೦, ಪ್ರಶಸಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತದೆ.

ಗಂಗಾ ಪಾದೇಕಲ್ಲು ಅವರು ಸೆಪ್ಟಂಬರ್ 01, 1948ರಂದು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಜನಿಸಿದರು. ಅವರ ಮೂಲ ಹೆಸರು ಗಂಗಾರತ್ನ. ಮುಳಿಯ ಕೇಶವ ಭಟ್ಟ ಹಾಗೂ ಸರಸ್ವತಿ ಅಮ್ಮ ಇವರ ತಂದೆ ತಾಯಿ. ಏಳನೆಯ ತರಗತಿಯವರೆಗೆ ವಿದ್ಯಾಭ್ಯಾಸ ಮಾಡಿದ ಗಂಗಾರತ್ನ ಅವರು ಹದಿನಾರನೆ ವಯಸ್ಸಿನಲ್ಲಿ ಪಾದೇಕಲ್ಲು ಗೋವಿಂದ ಭಟ್ಟರನ್ನು ವಿವಾಹವಾದರು. ಇಬ್ಬರು ಹೆಣ್ಣುಮಕ್ಕಳನ್ನು ಹೊಂದಿದ್ದಾರೆ. ತಮ್ಮ 34ನೆಯ ವಯಸ್ಸಿನಲ್ಲಿ ಪತಿಯನ್ನು ಕಳೆದುಕೊಂಡರು.

ತಮ್ಮ ಸಾಹಿತ್ಯಕ ಕೊಡುಗೆಗಳ ಮೂಲಕ ನಾಡಿನಾದ್ಯಂತ ಹೆಸರನ್ನು ಗಳಿಸಿದರು. ಪುಲಪೇಡಿ ಮತ್ತುಇತರ ಕತೆಗಳು, ಹೆಜ್ಜೆ ಮೂಡದ ಹಾದಿಯಲ್ಲಿ, ಹೊಸಹೆಜ್ಜೆ, ವಾಸ್ತವ, ಕ್ಷಮಯಾಧರಿತಿ, ನೆಲೆ ತಪ್ಪಿದ ಹಕ್ಕಿ, ಮನ್ನಣೆಯ ದಾಹ, ಈ ಪ್ರಜಾರಾಜ್ಯದಲ್ಲಿ, ಸಂಕ್ರಮಣ, ಚಿನ್ನದ ಸೂಜಿ ಇವರ ಕಥಾಸಂಕಲನಗಳು. ಹೊನ್ನಳ್ಳಿಯಲ್ಲೊಮ್ಮೆ, ಸೆರೆಯಿಂದ ಹೊರಗೆ, ಪಯಣದ ಹಾದಿಯಲ್ಲಿ, ಮೌನರಾಗಗಳು, ಅದೃಷ್ಟರೇಖೆ, ಕನಕಾಂಬರಿ, ಸೆರಗಿನಕೆಂಡ, ಇನ್ನೊಂದು ಅಧ್ಯಾಯ, ಬಂಗಾರದ ಜಿಂಕೆ ಹಿಂದೆ, ಇವರ ಕಾದಂಬರಿಗಳು.

ಆಯ್ದ ಕತೆಗಳು, ಪ್ರತಿಬಿಂಬ, ಮುಳಿಯ ಮೂಕಾಂಬಿಕೆ, ಏರ್ಯಚಂದ್ರ ಭಾಗಿ ರೈ, ಇವರ ಸಂಪಾದಿತ ಕೃತಿಗಳು.

ಪ್ರಶಸ್ತಿ : ಸೆರೆಯಿಂದ ಹೊರಗೆ ಕಾದಂಬರಿಗೆ ಕನ್ನಡಸಾಹಿತ್ಯ ಪರಿಷತ್ತಿನ ಮಲ್ಲಿಕಾ ಪ್ರಶಸ್ತಿ, ಇನ್ನೊಂದು ಅಧ್ಯಾಯ ಕಾದಂಬರಿಗೆ ವನಿತಾ ಕಾದಂಬರಿ ಸ್ಪರ್ಧೆಯಲ್ಲಿ ಬಹುಮಾನ, ಕೃಷ್ಣಬಾಯಿ ದತ್ತಿನಿಧಿ ಪ್ರಶಸ್ತಿ, ನೀರ್ಪಾಜೆ ಭೀಮ ಭಟ್ಟ ಪ್ರಶಸ್ತಿ, ಅನುಪಮಾ ಪ್ರಶಸ್ತಿ, ಪುಲಪೇಡಿಕತೆಯಾಧಾರಿತ ರೇಡಿಯೋ ನಾಟಕಕ್ಕೆ ರಾಷ್ಟ್ರೀಯ ನಾಟಕೋತ್ಸವದಲ್ಲಿ ಮೊದಲ ಬಹುಮಾನ ದೊರಕಿದೆ.

LEAVE A REPLY

Please enter your comment!
Please enter your name here