ನಾಳೆ(ಎ.9): ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಜನಾರ್ದನ ಗೌಡರಿಗೆ ನೆಲ್ಯಾಡಿಯಲ್ಲಿ ಸಾರ್ವಜನಿಕ ಸನ್ಮಾನ

0

ನೆಲ್ಯಾಡಿ: ನೆಲ್ಯಾಡಿ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಲವು ವರ್ಷ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಜನಾರ್ದನ ಗೌಡ ಟಿ.,ಅವರಿಗೆ ನೆಲ್ಯಾಡಿ ಸರಕಾರಿ ಹಿ.ಪ್ರಾ.ಶಾಲೆಯ ಪೂರ್ವ ವಿದ್ಯಾರ್ಥಿ ಸಂಘ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನೆಲ್ಯಾಡಿಯ ವಿದ್ಯಾಭಿಮಾನಿಗಳ ವತಿಯಿಂದ ಸಾರ್ವಜನಿಕ ಸನ್ಮಾನ’ ಗುರುಭ್ಯೋ ನಮ: ‘ ಎ.9ರಂದು ಸಂಜೆ 6 ಗಂಟೆಯಿಂದ ನಡೆಯಲಿದೆ.


ಸಂಜೆ ಲಹರಿ ಸಂಗೀತ ಕಲಾಕೇಂದ್ರ ಐಐಸಿಟಿ ನೆಲ್ಯಾಡಿ ಇವರಿಂದ ಸುಗಮ ಸಂಗೀತ, ನಟವರ್ಯ ಡ್ಯಾನ್ಸ್ ಸ್ಟುಡಿಯೋ ನೆಲ್ಯಾಡಿ ಇವರಿಂದ ನೃತ್ಯ ಕಾರ್ಯಕ್ರಮ ನಡೆಯಲಿದೆ. ಬಳಿಕ ಸಾರ್ವಜನಿಕ ಸನ್ಮಾನ, ಸಭಾ ಕಾರ್ಯಕ್ರಮ ನಡೆಯಲಿದೆ. ಸಭಾ ಕಾರ್ಯಕ್ರಮದ ಬಳಿಕ ಅಮ್ಮ ಕಲಾವಿದೆರ್, ಕುಡ್ಲ ಇವರಿಂದ ‘ಅಲೇ ಬುಡಿಯೆರ್‌ಗೆ..!’ತುಳು ಹಾಸ್ಯ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here