ಸವಣೂರಿನಲ್ಲಿ ಪೊಲೀಸ್, ಸಿ.ಆರ್. ಪಿ.ಎಫ್ ಪಥಸಂಚಲನ

0

ಪುತ್ತೂರು: ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬಂಧಿಸಿದ ಕರ್ತವ್ಯಗಳನ್ನು ನಿರ್ವಹಿಸಲು ಆಗಮಿಸಿದ ಸಿಆರ್‌ಪಿಎಫ್ ತಂಡ ಹಾಗೂ ಸ್ಥಳೀಯ ಪೊಲೀಸರಿಂದ ಸವಣೂರು ಪೇಟೆಯಲ್ಲಿ ಪಥ ಸಂಚಲನ ನಡೆಯಿತು.

ಬೆಳ್ಳಾರೆ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರಮುಖ ಹಾಗೂ ಸೂಕ್ಷ್ಮ ಸ್ಥಳಗಳಾದ ಸವಣೂರಿನಲ್ಲಿ ಪೊಲೀಸ್ ಅಧೀಕ್ಷಕರ ನೇತೃತ್ವದಲ್ಲಿ ಸಿಆರ್‌ಪಿಎಫ್ ಕಂಪನಿ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳು ಪಥ ಸಂಚಲನ ಮಾಡಿ ಸಾರ್ವಜನಿಕರಲ್ಲಿ ಆತ್ಮ ವಿಶ್ವಾಸ ಮೂಡಿಸಿದರು.

LEAVE A REPLY

Please enter your comment!
Please enter your name here