ನಂದಕುಮಾರ್ ಜತೆ ಡಿ.ಕೆ.ಶಿ. ಮಾತುಕತೆ

0

ಸುಳ್ಯ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಕಾರ್ಯಕರ್ತರು ಗೊಂದಲ ಪಡಬೇಡಿ- ಎಂ.ಎಲ್.ಸಿ. ಮಂಜುನಾಥ ಭಂಡಾರಿ ಹೇಳಿಕೆ

ಕಡಬ: ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿ ನಂದಕುಮಾರ್ ಅವರಿಗೆ ಅವಕಾಶ ಕೈ ತಪ್ಪಿರುವ ಹಿನ್ನೆಲೆಯಲ್ಲಿ ನಂದ ಕುಮಾರ್ ಅಭಿಮಾನಿಗಳು ನಂದಕುಮಾರ್ ಅವರಿಗೆ ಟಿಕೇಟ್ ನೀಡಬೇಕು ಎಂದು ಆಗ್ರಹಿಸುತ್ತಿದ್ದು ,ಈ ಹಿನ್ನಲೆಯಲ್ಲಿ ನಂದಕುಮಾರ್ ಜತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮಾತುಕತೆ ನಡೆಸಿದ್ದಾರೆ. ಆದುದರಿಂದ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ಕಾರ್ಯಕರ್ತರು ಕೂಡ ಯಾವುದೇ ಗೊಂದಲ ಪಡಬಾರದು ಎಂದು ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಹೇಳಿದ್ದಾರೆ.


ಅವರು ಕಡಬ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಮಾಧ್ಯಮದರೊಂದಿಗೆ ಮಾತನಾಡಿ, ನಂದಕುಮಾರ್ ಅವರು ಆಕಾಂಕ್ಷಿಯಾಗಿದ್ದರು, ಹೈಕಮಾಂಡ್ ಕೃಷ್ಣಪ್ಪ ಅವರಿಗೆ ಟಿಕೇಟ್ ನೀಡಿದೆ. ಇಲ್ಲಿ ಹೈಕಮಾಂಡ್ ನಿರ್ಧಾರಕ್ಕೆ ಕಾಂಗ್ರೆಸ್ ಬದ್ದವಾಗಿದೆ. ಕಾರ್ಯಕರ್ತರು ಯಾರು ಗೊಂದಲಪಡಬಾರದು, ಮುಂದಿನ ದಿನಗಳಲ್ಲಿ ನಂದಕುಮಾರ್ ಅವರು ಪಕ್ಷ ಸೂಚಿಸಿದ ಅಭ್ಯರ್ಥಿ ಯ ಗೆಲುವಿಗೆ ಶ್ರಮಿಸಲಿದ್ದಾರೆ ಎಂದು ಹೇಳಿದ ಅವರು ನಂದಕುಮಾರ್ ಅಭಿಮಾನಿಗಳು ನಡೆಸುತ್ತಿರುವ ಸಭೆಗಳು ಸಮ್ಮತವಲ್ಲ ಎಂದು ಪರೋಕ್ಷವಾಗಿ ಹೇಳಿದರು. ಈ ಸಂದರ್ಭದಲ್ಲಿ ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ , ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಮಾಜಿ ಜಿ.ಪಂ.ಸದಸ್ಯ ರಾದ ಪಿ.ಪಿ.ವರ್ಗೀಸ್, ಸರ್ವೋತ್ತಮ ಗೌಡ ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here