ಪುತ್ತೂರು ಕಾಂಗ್ರೆಸ್ ಕಚೇರಿಯಲ್ಲಿ ಉಸ್ತುವಾರಿಗಳಿಗೆ ಅಭಿನಂದನೆ

0

ಪುತ್ತೂರು: ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಉಸ್ತುವಾರಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು. ಪುತ್ತೂರು ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿ ನೇಮಕಗೊಂಡ ಮುರಳೀಧರ ರೈ ಮಠಂತಬೆಟ್ಟು, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿ ನೇಮಕಗೊಂಡ ನ್ಯಾಯವಾದಿ ನೂರುದ್ದೀನ್ ಸಾಲ್ಮರ, ಪ್ರಚಾರ ಸಮಿತಿ ಜಿಲ್ಲಾ ಜಂಟಿ ಸಂಯೋಜಕ ಕೃಷ್ಣಪ್ರಸಾದ್ ಆಳ್ವ, ಪುತ್ತೂರು ಬ್ಲಾಕ್ ಪ್ರಚಾರ ಸಮಿತಿ ಸಂಯೋಜಕ ನ್ಯಾಯವಾದಿ ಭಾಸ್ಕರ ಗೌಡ ಕೋಡಿಂಬಾಳ, ಕೇರಳದ ಉಸ್ತುವಾರಿ ಸಿಜುರವರಿಗೆ ಅಭಿನಂದನಾ ಕಾರ್ಯಕ್ರಮ ನಡೆಸಲಾಯಿತು.

ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಪುತ್ತೂರು ಕೋಟಿಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಆಲಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾ ಅರಸ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮೌರೀಸ್ ಮಸ್ಕರೇನಸ್, ರೋಶನ್ ರೈ ಬನ್ನೂರು, ಸಂತೊಷ್ ಭಂಡಾರಿ ಚಿಲ್ಮೆತ್ತಾರು, ಸನತ್ ರೈ ಏಳ್ನಾಡುಗುತ್ತು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here