ನಂದಕುಮಾರ್ ಗೆ ಟಿಕೇಟ್ ಕೈ ತಪ್ಪಿದ ಹಿನ್ನಲೆ-ಎ.9ರಂದು ನಿಂತಿಕಲ್ಲಿನಲ್ಲಿ ಕಾರ್ಯಕರ್ತರ ಬೃಹತ್ ಸಮಾವೇಶ

0

ಕಡಬ: ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಯಾಗಿದ್ದ ನಂದ ಕುಮಾರ್ ಅವರಿಗೆ ಟಿಕೇಟ್ ಕೈ ತಪ್ಪಿರುವ ಹಿನ್ನಲೆಯಲ್ಲಿ ನಂದಕುಮಾರ್ ಅಭಿಮಾನಿ ಬಳಗದ ವತಿಯಿಂದ ಎ.9ರಂದು ಬೃಹತ್ ಸಮಾವೇಶ ಹಮ್ಮಿಕೊಂಡಿದ್ದಾರೆ.


ಸುಳ್ಯ ವಿಧಾನ ಸಭಾ ಕ್ಷೇತ್ರದ ಪ್ರಾಮಾಣಿಕ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ನಿಂತಿಕಲ್ಲು ಧರ್ಮಶ್ರೀ ಆರ್ಕೇಡ್ ನಲ್ಲಿ ಎ.9ರ ಸಂಜೆ 3 ಗಂಟೆಗೆ ನಡೆಯಲಿದೆ. ಸುಳ್ಯದಲ್ಲಿ ಕಾಂಗ್ರೆಸ್ ಗೆಲುವಿಗಾಗಿ ಪ್ರಾಮಾಣಿಕ ಕಾರ್ಯಕರ್ತರ ಧ್ವನಿಯನ್ನು, ಭಾವನೆಯನ್ನು ರಾಜ್ಯ ಮತ್ತು ಕೇಂದ್ರ ವರಿಷ್ಠರಿಗೆ ತಲುಪಿಸಲು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here