ಕೌಡಿಚ್ಚಾರ್‌ನಲ್ಲಿ ಕಾರು – ಬೈಕ್ ಅಪಘಾತ-ಅಡ್ಕಾರಿನ ನವದಂಪತಿಗೆ ಗಂಭೀರ ಗಾಯ

0

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್‌ನಲ್ಲಿದ್ದ ಅಡ್ಕಾರಿನ ನವದಂಪತಿ ಗಂಭೀರವಾಗಿ ಗಾಯಗೊಂಡ ಘಟನೆ ಕೌಡಿಚ್ಚಾರ್‌ನಲ್ಲಿ ಎ.8ರಂದು ಮಧ್ಯಾಹ್ನ ಸಂಭವಿಸಿದೆ.

ಜಾಲ್ಸೂರು ಗ್ರಾಮದ ಅಡ್ಕಾರು ಕೋನಡ್ಕಪದವಿನ ಸಂದೇಶ್ ಹಾಗೂ ಅವರ ಪತ್ನಿ ರಕ್ಷಿತಾ ಗಾಯಗೊಂಡವರು. ಇವರು ಬೈಕ್‌ನಲ್ಲಿ ಪುತ್ತೂರಿಗೆ ಬರುತ್ತಿದ್ದ ಸಂದರ್ಭದಲ್ಲಿ ಪುತ್ತೂರಿನಿಂದ ಸುಳ್ಯ ಕಡೆಗೆ ಹೋಗುತ್ತಿದ್ದ ಕಾರು ಮತ್ತು ಇವರ ಬೈಕ್ ನಡುವೆ ಢಿಕ್ಕಿ ಸಂಭವಿಸಿತ್ತು. ಬೈಕ್‌ನಲ್ಲಿದ್ದ ನವದಂಪತಿ ಬೈಕ್‌ನಿಂದ ರಸ್ತೆಗೆ ಎಸೆಯಲ್ಪಟ್ಟು, ಕಾಲಿಗೆ ಗಂಭೀರವಾಗಿ ಗಾಯಗೊಂಡರೆನ್ನಲಾಗಿದೆ. ಸ್ಥಳೀಯರು ಸೇರಿ ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ಸಾಗಿಸಿ, ಅಲ್ಲಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಸಂದೇಶ್ ಅವರಿಗೆ ಕಳೆದ ವಾರವಷ್ಟೆ ವಿವಾಹವಾಗಿದ್ದು, ನವದಂಪತಿ ಪುತ್ತೂರಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸಂದೇಶ್ ಹಾಗೂ ಅವರ ಪತ್ನಿ ರಕ್ಷಿತಾರವರ ಕಾಲು ಫ್ರಾಕ್ಚರ್ ಆಗಿದೆ ಎಂದು ತಿಳಿದುಬಂದಿದೆ. ಕಾರು ಚಾಲಕನ ಅಜಾಗರೂಕತೆಯಿಂದ ಈ ಅಪಘಾತ ಸಂಭವಿಸಿರುವುದಾಗಿ ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವುದಾಗಿ ತಿಳಿದುಬಂದಿದೆ.

LEAVE A REPLY

Please enter your comment!
Please enter your name here