ಬೆಳ್ತಂಗಡಿಯ ಮಹಿಳೆಯೋರ್ವರು ಪುತ್ತೂರು ಗುಮ್ಮಟಗದ್ದೆ ತವರು ಮನೆಯಲ್ಲಿ ಬಾವಿಗೆ ಬಿದ್ದು ಮೃತ್ಯು

0

ಪುತ್ತೂರು: ಬೆಳ್ತಂಗಡಿಯ ಮಹಿಳೆಯೊಬ್ಬರು ಪುತ್ತೂರು ಬೆಟ್ಟಂಪಾಡಿ ಗ್ರಾಮದ ಗುಮ್ಮಟಗದ್ದೆ ತವರು ಮನೆಯಲ್ಲಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಎ.10ರಂದು ನಡೆದ ಬಗ್ಗೆ ವರದಿಯಾಗಿದೆ.

ಬೆಳ್ತಂಗಡಿ ತಾಲೂಕಿನ ಪುದುಬೆಟ್ಟು ಉದ್ದದಪಳಿಕೆ ಪುರುಷೋತ್ತಮ ಎಂಬವರ ಪತ್ನಿ ಪುಣ್ಯಶ್ರೀ ಎಂಬವರು ಬಾವಿಗೆ ಬಿದ್ದು ಮೃತಪಟ್ಟವರು. ಬೆಟ್ಟಂಪಾಡಿ ಗ್ರಾಮದ ಗುಮ್ಮಟಗದ್ದೆಯ ಬಾಲಕೃಷ್ಣ ಎಂಬವರು ತನ್ನ ಪುತ್ರಿ ಪುಣ್ಯಶ್ರೀಯವರನ್ನು 2017ರ ಜ.1ಕ್ಕೆ ಬೆಳ್ತಂಗಡಿಯ ಪುರುಷೋತ್ತಮ ಎಂಬವರಿಗೆ ವಿವಾಹ ಮಾಡಿಸಿದ್ದರು. ಪುರುಷೋತ್ತಮ ಮತ್ತು ಪುಣ್ಯಶ್ರಿ ದಂಪತಿಗೆ ಇಬ್ಬರು ಮಕ್ಕಳಿದ್ದರು. ಎ.4ರಂದು ತವರು ಮನೆಗೆ ಪುಣ್ಯಶ್ರೀಯವರು ಬಂದಿದ್ದರು. ಎ.10ರಂದು ಪುಣ್ಯಶ್ರೀಯವರು ತನ್ನ ಗಂಡ ಪುರುಷೋತ್ತಮ ಅವರಿಗೆ ವಿಡಿಯೋ ಕರೆ ಮಾಡಿ ಮಾತನಾಡಿದ್ದರು. ರಾತ್ರಿ ವೇಳೆ ಪುಣ್ಯಶ್ರೀಯವರು ಚಿಕ್ಕಮ್ಮ ಲತಾ ಅವರ ಮೊಬೈಲ್‌ಗೆ ಕರೆ ಮಾಡಿ ತಾನು ಸಾಯುವ ಕುರಿತು ಹೇಳಿ ಮನೆಯ ಬಳಿಯ ಬಾವಿಗೆ ಹಾರಿದ್ದರು. ಈ ಕುರಿತು ಮಾಹಿತಿ ಅರಿತು ಪುಣ್ಯಶ್ರೀಯವರನ್ನು ಬಾವಿಯಿಂದ ಮೇಲಕ್ಕೆತ್ತಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ದಾಗ ಆಗಲೇ ಅವರು ಮೃತಪಟ್ಟಿದ್ದರು. ಘಟನೆ ಕುರಿತು ಸಂಪ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here