ಪುತ್ತೂರಿನಲ್ಲಿ ಶಕುಂತಳಾ ಶೆಟ್ಟಿಯವರಿಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ಕೊಡದಿದ್ದಲ್ಲಿ ಹುದ್ದೆಗೆ ಸಾಮೂಹಿಕ ರಾಜಿನಾಮೆ – ಮಹಿಳಾ ಕಾಂಗ್ರೆಸ್ ಎಚ್ಚರಿಕೆ

0

ಪುತ್ತೂರು: ಪುತ್ತೂರಿನಲ್ಲಿ ಶಕುಂತಳಾ ಶೆಟ್ಟಿಯವರಿಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ಕೊಡದಿದ್ದಲ್ಲಿ ತಮ್ಮ ಹುದ್ದೆಗೆ ಸಾಮೂಹಿಕ ರಾಜಿನಾಮೆ ನೀಡುವುದಾಗಿ ಮಹಿಳಾ ಕಾಂಗ್ರೆಸ್ ಎಚ್ಚರಿಕೆ ನೀಡಿದ್ದಾರೆ.

ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಶಾರದಾ ಅರಸ್ ಅವರು ಮಾತನಾಡಿ ಪುತ್ತೂರು ಮಹಿಳಾ ಕಾಂಗ್ರೆಸ್ ನ ಎಲ್ಲಾ ಪದಾಧಿಕಾರಿಗಳು ಸಾಮೂಹಿಕವಾಗಿ ಪಕ್ಷಕ್ಕೆ ರಾಜಿನಾಮೆ ನೀಡಲಾಗುವುದು. ಶಕುಂತಳಾ ಶೆಟ್ಟಿಯವರು ತಮ್ಮ ಶಾಸಕತ್ವದ ಅವಧಿಯಲ್ಲಿ ಅನೇಕ ಮಹಿಳೆಯರ ಏಳಿಗೆಗಾಗಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ಮಹಿಳೆಯರ ರಕ್ಷಣೆಗೆ ಮಹಿಳಾ ಪೋಲಿಸ್ ಠಾಣೆಯನ್ನು ಪುತ್ತೂರಿನಲ್ಲಿ ಆರಂಭಿಸಿದರು. ಮಹಿಳೆಯರು ಆರ್ಥಿಕವಾಗಿ ಬೆಳೆಯಲು ಸ್ತ್ರೀ ಶಕ್ತಿ ಸಂಘಟನೆಗಳನ್ನು ಬಲಪಡಿಸಲು ಸ್ತ್ರೀ ಶಕ್ತಿ ಭವನದ ಸ್ಥಾಪನೆ ಮಾಡಿದ್ದಾರೆ. ಮಹಿಳೆಯರ ಸಮಸ್ಯೆಗಳ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡುವ ಮೂಲಕ ಮಹಿಳೆಯರಿಗೆ ಭರವಸೆಯ ಆಶಾಕಿರಣವಾಗಿದ್ದಾರೆ. ಈಗಾಗಲೇ ಬಿಜೆಪಿಯು ದಕ್ಷಿಣ ಕನ್ನಡದಲ್ಲಿ ಮಹಿಳೆಯರಿಗೆ ಪುತ್ತೂರು ಮತ್ತು ಸುಳ್ಯದಲ್ಲಿ ಅವಕಾಶ ನೀಡಿದೆ. ಆದರೆ ಕಾಂಗ್ರೆಸ್ ಪಕ್ಷ ಮಹಿಳೆಯರನ್ನು ಕಡೆಗಾಣಿಸುವ ಮೂಲಕ ದಕ್ಷಿಣ ಕನ್ನಡದಲ್ಲಿ ಅತೀ ಹೆಚ್ಚು ಇರುವ ಮಹಿಳಾ ಮತದಾರರನ್ನು ಅವಮಾನಿಸುವ ಕೆಲಸದಲ್ಲಿ ತೊಡಗಿದೆ ಎಂದು ಅನಿಸುತ್ತಿದೆ. ಈ ನಿಟ್ಟಿನಲ್ಲಿ ಶಕುಂತಳಾ ಶೆಟ್ಟಿಯವರಿಗೆ ಅವಕಾಶ ನೀಡಬೇಕೆಂದು ಆಗ್ರಹಿಸಿದ್ದಾರೆ.

ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ವಿಶಾಲಾಕ್ಷಿ ಬನ್ನೂರು, ನಗರ ಮಹಿಳಾ ಕಾಂಗ್ರೆಸ್ ಮಾಜಿ ಅಧ್ತಕ್ಷೆ ವಿಲ್ಮ ಗೋನ್ಸಾಲಿಸ್, ಜಿಲ್ಲಾ ಅಧ್ಯಕ್ಷೆ ಸುಧಾ ಕುಂಜತ್ತಾಯ, ಪ್ರಧಾನ ಕಾರ್ಯದರ್ಶಿ ಸೀತಾ ಭಟ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here