ನೆಹರೂನಗರದ ವಿವೇಕಾನಂದ ಕಾಲೇಜಿನಲ್ಲಿ ರಕ್ತದಾನ ಶಿಬಿರ

0

ಪುತ್ತೂರು: ನೆಹರೂನಗರದ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯುತ್ತ) ಕಾಲೇಜಿನಲ್ಲಿ ರೆಡ್‌ಕ್ರಾಸ್, ಎನ್.ಸಿ.ಸಿ, ಎನ್.ಎಸ್.ಎಸ್, ರೋವರ್‌ರೇಂಜರ್, ವಿದ್ಯಾರ್ಥಿ ಸಂಘ, ರೋಟರಿ-ಕ್ಯಾಂಪ್ಕೋ ರಕ್ತನಿಧಿ ಕೇಂದ್ರ ಪುತ್ತೂರು, ರೋಟರಿ ರಕ್ತನಿಧಿ ಕೇಂದ್ರ, ವೆನ್‌ಲಾಕ್ ಸರ್ಕಾರಿ ಆಸ್ಪತ್ರೆ ಮಂಗಳೂರು, ಪ್ರಾದೇಶಿಕ ರಕ್ತನಿಧಿ ಕೇಂದ್ರ ಇದರ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರ ನಡೆಯಿತು.

ರೋಟರಿ ಕ್ಲಬ್‌ನ ಅಧ್ಯಕ್ಷ ಪ್ರಶಾಂತ್ ಶೆಣೈ, ವೈದ್ಯಾಧಿಕಾರಿ ಡಾ.ಶರತ್‌ಕುಮಾರ್ ರಾವ್, ಕಾಲೇಜಿನ ಐಕ್ಯೂಎಸಿ ಸಂಯೋಜಕ ಪ್ರೊ.ಶಿವಪ್ರಸಾದ್, ಪುತ್ತೂರು ರೋಟರಿ ಕ್ಲಬ್‌ನ ಸದಸ್ಯ ವಿಕ್ಟರ್ ಮಾರ್ಟಿಸ್, ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ನರಸಿಂಹ ಭಟ್ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ವೈದ್ಯಾಧಿಕಾರಿ ಡಾ. ರಾಮಚಂದ್ರ ಭಟ್ ಭಾಗವಹಿಸಿದರು. ಸುಮಾರು 186 ಯುನಿಟ್ ರಕ್ತವನ್ನು ವಿದ್ಯಾರ್ಥಿಗಳಿಂದ ಸಂಗ್ರಹಿಸಲಾಯಿತು.

LEAVE A REPLY

Please enter your comment!
Please enter your name here