ಪುಣ್ಚತ್ತಾರು ಕ್ಷೇತ್ರದಲ್ಲಿ ಜೀರ್ಣೋದ್ಧಾರ ಪ್ರಯುಕ್ತ ಮುಳ್ಳುಗುಳಿಗ ಕಟ್ಟೆಯ ಅನುಜ್ಞಾ ಕಲಶ

0

ಕಾಣಿಯೂರು: ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದ್ದು, ಆ ಪ್ರಯುಕ್ತ ಕ್ಷೇತ್ರದಲ್ಲಿ ಮುಳ್ಳುಗುಳಿಗ ಕಟ್ಟೆಯ ಅನುಜ್ಞಾ ಕಲಶವು ಅರ್ಚಕ ಚಿದಾನಂದ ಉಪಾಧ್ಯಾಯ ಕಲ್ಪಡ ಇವರ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರು, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ವೆಂಕಟ್ರಮಣ ಆಚಾರ್ಯ ಕರಿಮಜಲು, ಮೊಕ್ತೇಸರರಾದ ಜನಾರ್ದನ ಆಚಾರ್ಯ, ಕೃಷ್ಣ ಆಚಾರ್ಯ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಶೇಷಪ್ಪ ಗೌಡ ಬೆದ್ರಂಗಳ,ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಡಾ. ದೇವಿಪ್ರಸಾದ್ ಕಾನತ್ತೂರ್, ಕಾರ್ಯದರ್ಶಿ ಬಾಲಕೃಷ್ಣ ರೈ ಕಾಸ್ಪಾಡಿಗುತ್ತು, ಜೀರ್ಣೋದ್ಧಾರ ಸಮಿತಿಯ ಗೌರವ ಸಲಹೆಗಾರರಾದ ಗಣೇಶ್ ಉದನಡ್ಕ, ಸಂಜೀವ ರೈ ಪೈಕ, ಉಪಾಧ್ಯಕ್ಷ ಪ್ರದೀಪ್ ಬೊಬ್ಬೆಕೇರಿ, ವಿಶ್ವನಾಥ ರೈ ಮಾಳ, ಕಾರ್ಯದರ್ಶಿ ಮೋನಪ್ಪ ಬಂಡಾಜೆ, ಕೋಶಾಧಿಕಾರಿ ಭವಿಷ್ ಕರಿಮಜಲು, ರಾಜೇಶ್ ಕರಿಮಜಲು, ಜತೆ ಕಾರ್ಯದರ್ಶಿ ಮೋಹನ್ ಕರಿಮಜಲು, ಪ್ರಮೋದ್ ಉಪ್ಪಡ್ಕ, ರಾಕೇಶ್ ಕರಿಮಜಲು, ವಾಸುದೇವ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here