ರಾಮಕುಂಜ: ಅಂಬೇಡ್ಕರ್ ಜಯಂತಿ ಆಚರಣೆ ಮತ್ತು ಮತದಾನ ಜಾಗೃತಿ ಅಭಿಯಾನ

0

ರಾಮಕುಂಜ: ರಾಮಕುಂಜೇಶ್ವರ ಪ್ರಥಮ ದರ್ಜೆ ಕಾಲೇಜು ರಾಮಕುಂಜದಲ್ಲಿ 132 ನೇ ಜನ್ಮದಿನಾಚರಣೆಯ ಪ್ರಯುಕ್ತ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಗಣರಾಜ ಕುಂಬ್ಳೆ ಮಾತನಾಡಿ ಡಾ ಅಂಬೇಡ್ಕರ್ ರವರ ಜೀವನ, ಸಾಧನೆ ಹಾಗೂ ಪ್ರಸ್ತುತ ಸಂದರ್ಭದಲ್ಲಿ ಅವರ ವಿಚಾರಗಳ ಮಹತ್ವವನ್ನು ತಿಳಿಸಿದರು.

ಉಪನ್ಯಾಸಕ ದಯಾನಂದ ಮತ್ತು ರೇವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎಲ್ಲಾ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಡಾ ಬಿ ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ವಂದನೆ ಸಲ್ಲಿಸಿದರು. ಕಲಾ ವಿಭಾಗದ ವಿದ್ಯಾರ್ಥಿಗಳು ಮತದಾನ ಸಾಕ್ಷರತಾ ಕ್ಲಬ್ ನ ವತಿಯಿಂದ ರಾಮಕುಂಜದ ಪರಿಸರದಲ್ಲಿ ಮತದಾನದ ಬಗ್ಗೆ ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸಿದರು.

LEAVE A REPLY

Please enter your comment!
Please enter your name here