ಪುತ್ತೂರು ಜಾತ್ರೆ – ಮಾಹಿತಿ ಕೇಂದ್ರ ಉದ್ಘಾಟನೆ

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆಯ ಎ.16ರ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೇವರ ಕಿರುವಾಳು ಬರುವ ಮತ್ತು 17 ರಂದು ಬ್ರಹ್ಮರಥೋತ್ಸವದ ಅಂಗವಾಗಿ ದೇವಳದ ಸೋಪಾನ ಮಂಟಪದಲ್ಲಿ ನಡೆಯುವ ಮಾಹಿತಿ ಕೇಂದ್ರವನ್ನು ಉದ್ಘಾಟಿಸಲಾಯಿತು.


ದೇವಳದ ಕಾರ್ಯನಿರ್ವಾಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್ ಅವರು ಮಾಹಿತಿ‌ ಕೇಂದ್ರವನ್ನು ಉದ್ಘಾಟಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರವೀಂದ್ರನಾಥ ರೈ ಬಳ್ಳಮಜಲು, ಬಿ ಐತ್ತಪ್ಪ ನಾಯ್ಕ್, ಶೇಖರ್ ನಾರಾವಿ, ಮಾಹಿತಿ ಕೇಂದ್ರದ ಉದ್ಘೋಷಕ ರಾಜೇಶ್ ಬನ್ನೂರು ಸಹಿತ ಹಲವಾರು ಮಂದಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here