ಯುವವಾಹಿನಿ ಪುತ್ತೂರು ಘಟಕ ಸೇರಿದಂತೆ ಹಲವು ಸಂಘಟನೆಯಿಂದ ಸ್ವಚ್ಚತಾ ಕಾರ್ಯಕ್ರಮ

0

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಹಾಗೂ ಯುವವಾಹಿನಿ ಗ್ರಾಮ ಸಂಚಲನ ಸಮಿತಿ ನರಿಮೊಗರು ಮತ್ತು ಬಿಲ್ಲವ ಗ್ರಾಮ ಸಮಿತಿ ನರಿಮೊಗರು ಇದರ ಸಹಕಾರದೊಂದಿಗೆ ಎ.16ರಂದು ನರಿಮೊಗರು ಮೃತ್ಯುಂಜಯೇಶ್ವರ ದೇವಸ್ಥಾನದ ದ್ವಾರದ ಬಳಿಯಿಂದ ಮುಕ್ವೆಯವರೆಗೆ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಭಾರತೀಯ ಸೇನೆಯ ನಿವೃತ್ತ ಯೋಧ ಭಾಸ್ಕರ ಪೂಜಾರಿ ನರಿಮೊಗರು ತೆಂಗಿನಕಾಯಿ ಒಡೆಯುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷ ಉಮೇಶ್ ಬಾಯರ್, ಕೇಂದ್ರ ಸಮಿತಿ ಮಂಗಳೂರು ಇದರ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ ಸನಿಲ್, ಕೇಂದ್ರ ಸಮಿತಿಯ ಸಮಾಜ ಸೇವ ನಿರ್ದೇಶಕ ಬಾಬು ಪೂಜಾರಿ, ನರಿಮೊಗರು ಬಿಲ್ಲವ ಗ್ರಾಮ ಸಮಿತಿಯ ಅಧ್ಯಕ್ಷ ಪದ್ಮನಾಭ ಪೂಜಾರಿ ಬೆದ್ರಾಲ, ವಿದ್ಯಾರ್ಥಿ ನಾಯಕ ಭವಿಷ್ ಹಾಗೂ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರುಗಳು, ಸದಸ್ಯರುಗಳು ಹಾಗೂ ನರಿಮೊಗರು ಗ್ರಾಮ ಸಂಚಲಣ ಸಮಿತಿಯ ಸದಸ್ಯರುಗಳು ಭಾಗವಹಿಸಿದ್ದರು. ಘಟಕದ ಉಪಾಧ್ಯಕ್ಷ ಜಯರಾಮ ಬಿ ಎನ್ ಸ್ವಾಗತಿಸಿ, ಕಾರ್ಯದರ್ಶಿ ಅಣ್ಣಿ ಪೂಜಾರಿಯವರು ಧನ್ಯವಾದಗೈದರು.

LEAVE A REPLY

Please enter your comment!
Please enter your name here