ನಾಳೆ ಅಶೋಕ್‌ ರೈ ನಾಮಪತ್ರ ಸಲ್ಲಿಕೆ- ದರ್ಬೆಯಿಂದ ಮೆರವಣಿಗೆ

0

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ 19ನೇ ತಾರೀಕಿನಂದು (ನಾಳೆ) ಮಧ್ಯಾಹ್ನ 2 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ.

ಬೆಳಿಗ್ಗೆ 9:30ಕ್ಕೆ ದರ್ಬೆ ಸರ್ಕಲ್ ಬಳಿಯಿಂದ ಮೆರವಣಿಗೆಯಲ್ಲಿ ಸಾಗಿ ಪುತ್ತೂರು ಉಪ ವಿಭಾಗಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂದರ್ಭದಲ್ಲಿ ಕ್ಷೇತ್ರದಾದ್ಯಂತ ಕಾಂಗ್ರೆಸ್ ಪಕ್ಷದ ಸದಸ್ಯರು, ಕಾರ್ಯಕರ್ತರು,ಪದಾಧಿಕಾರಿಗಳು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅಶೋಕ್ ಕುಮಾರ್ ರೈ ಕೇಳಿಕೊಂಡಿದ್ದಾರೆ. ನಾಮಪತ್ರ ಸಲ್ಲಿಕೆಯ ಬಳಿಕ ಕಿಲ್ಲೆ ಮೈದಾನದಲ್ಲಿ ಸಮಾವೇಶ ನಡೆಯಲಿದೆ.

ಈ ಹಿಂದೆ ಮಾಲಿಂಗೇಶ್ವರ ದೇವಾಲಯದ ಮುಂಭಾಗದಿಂದ ಮೆರವಣಿಗೆ ಆರಂಭಿಸಲಾಗುವುದು ಎಂದು ತಿಳಿಸಲಾಗಿತ್ತು.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here