ನ್ಯಾಯಾಂಗ ಇಲಾಖೆಯ ನಿವೃತ್ತ ಶೀಘ್ರ ಲಿಪಿಕಾರ ಬದಿಯಡ್ಕ ಶಂಕರ್ ಭಟ್ ನಿಧನ

0

ಪುತ್ತೂರು:ನ್ಯಾಯಾಂಗ ಇಲಾಖೆಯಲ್ಲಿ ಶೀಘ್ರ ಲಿಪಿಕಾರರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಸೇಡಿಯಾಪು ನಿವಾಸಿ ಬದಿಯಡ್ಕ ಶಂಕರ ಭಟ್ಟರು(78ವ.)ಏ.10ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಕಾನೂನು ಪದವೀಧರರಾಗಿದ್ದ ಅವರು ನ್ಯಾಯಾಂಗ ಇಲಾಖೆಯಲ್ಲಿ ಶೀಘ್ರಲಿಪಿಕಾರರಾಗಿ ಪುತ್ತೂರು, ಉಡುಪಿ, ಬಂಟ್ವಾಳ ಮತ್ತು ಸುಳ್ಯದಲ್ಲಿ ಒಟ್ಟು 37 ವರ್ಷಗಳ ಕಾಲ ಸೇವೆ ಸಲ್ಲಿಸಿ 2003 ಜನವರಿಯಲ್ಲಿ ನಿವೃತ್ತರಾಗಿದ್ದರು. ಬಳಿಕ ಕೃಷಿಯಲ್ಲಿ ತೊಡಗಿಸಿಕೊಂಡಿದ್ದರು.ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here